ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತರು ವಕ್ಭ್ ಬೋರ್ಡ್ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎರಡನೇ ದಿನದ ಹೋರಾಟದಲ್ಲಿ ಅವರು ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ ಶೇ.38 ರಷ್ಟು ವಕ್ಭ್ ಆಸ್ತಿ ಹೆಚ್ಚಳವಾಗಿದೆ. ಸಾರ್ವಜನಿಕರು, ಮಠಾಧೀಶರು, ಬಿಜೆಪಿ ಪಕ್ಷದಿಂದ ಹೋರಾಟ ತೀವ್ರಗೊಂಡಾಗ ಸಿಎಂ ರೈತರ ಪಹಣಿಗಳಲ್ಲಿನ ವಕ್ಭ್ ಬೋರ್ಡ ಪದ ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಆದರೂ ತಹÀಶೀಲ್ದಾರರು , ಡಿಸಿ ಮಲಗಿದ್ದಾರೆಯೇ ಸಿಎಂ ಆದೇಶಕ್ಕೆ ಬೆಲೆ ಇಲ್ಲವೇ ? ಸಿಎಂ ಆದೇಶ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟರೂ ಅದಕ್ಕೆ ಸ್ಪಂದನೆ ಇಲ್ಲವಾಗಿದೆ.ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತ ವಿರೋಧಿ ಸರ್ಕಾರ ಎಂದು ಹೇಳಿದರು.

ಕೇವಲ ಬಾಯಿ ಮಾತಿನ ಮೇಲೆ ನೋಟೀಸ್ ವಾಪಸ್ ಪಡೆದುಕೊಂಡಿದ್ದೇನೆ ಎಂದು ಹೇಳಿದರೆ ಸಾಲದು. ವಕ್ಭ್ ಬೋರ್ಡ್ ಎಂದು ಎಂಟ್ರಿ ಮಾಡಿದ್ದನ್ನು ತೆಗೆದು ಹಾಕಬೇಕು. ಒಂದು ಎಕರೆ ಜಮೀನು ವಕ್ಭ್ ಬೋರ್ಡ್ಗೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಗಂಗಾಧರ ನಾಡಗೌಡ , ಹೋರಾಟಗಾರ ನಾಗಲಿಂಗಯ್ಯ ಮಠ ಮಾತನಾಡಿ, ಸರ್ಕಾರದ ಕ್ರಮ ವಿರುದ್ಧ ಆಕ್ರೋಶ ಹೊರಹಾಕಿದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ 400 ಎಕರೆ ಜಮೀನುಗಳ ಮೇಲೆ ವಕ್ಭ್ ಬೋರ್ಡ್ ಹೆಸರು ಇರುವುದನ್ನು ತೆಗೆದು ಹಾಕಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಶಾಸಕ ಅಪ್ಪಾಜಿ ಮೌನವೇಕೆ ?: ತಾಲ್ಲೂಕಿನ ರೈತರಿಗೆ ಅನ್ಯಾಯವಾಗುತ್ತಿದ್ದರೂ ಶಾಸಕರು ಏನು ಮಾಡುತ್ತಿದ್ದೀರಿ ? ರೈತರ ಆಸ್ತಿ ಲೂಟಿ ಹೊಡೆಯುವವರ ಪರವಾಗಿದ್ದೀರಾ ? ಎಂದು ಮಾಜಿ ಶಾಸಕ ನಡಹಳ್ಳಿ ಪ್ರಶ್ನಿಸಿದರು.ಸಿಎಂ ಹೇಳಿಕೆ ಕೊಟ್ಟಿದ್ದು, ಆ ಬಗ್ಗೆ ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಡಬೇಕಿತ್ತು.ಆದರೆ ಈವರೆಗೂ ಅವರಿಂದ ರೈತರಪರವಾಗಿ ಒಂದು ಹೇಳಿಕೆ ಇಲ್ಲ.ತಹಶೀಲ್ದಾರ್‌ಗೆ ತಿಳಿಸಿ ವಕ್ಭ್ ಬೋರ್ಡ ಕರ್ನಾಟಕ ಸರ್ಕಾರ ತಗೆದುಹಾಕಲು ತಿಳಿಸಬೇಕು ಎಂದು ಹರಿಹಾಯ್ದರು.ಮುಖಂಡ ಕೆಂಚಪ್ಪ ಬಿರಾದಾರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಸಂಗಣ್ಣ ಕುಂಬಾರ,ರವಿ ಜಗಲಿ,ರವೀಂದ್ರ ಬಿರಾದಾರ, ರೈತ ಸಂಘಟನೆಯ ಮುಖಂಡ ಸಂಗಣ್ಣ ಬಾಗೇವಾಡಿ ಸೇರಿದಂತೆ ರೈತ ಮಹಿಳೆಯರು ಪಾಲ್ಗೊಂಡಿದ್ದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ