ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಪಾಲಕರನ್ನು ಸಂಪರ್ಕಿಸಿ ಅವರನ್ನು ತಮ್ಮ ಸಂಸ್ಥೆಯಲ್ಲಿ ಪ್ರವೇಶ ಪಡೆದುಕೊಳ್ಳಲು ಹಿಂಬಾಗಿಲಿನ ಮೂಲಕ ಶಿಕ್ಷಕರನ್ನು ಕಳಿಸಿ ತಮ್ಮ ವಿದ್ಯಾಸಂಸ್ಥೆಗಳ ಹೆಸರು ಮಾಡಿಕೊಳ್ಳುತ್ತಾ ಕೆಲವರು ಹೊರಟಿದ್ದಾರೆ.ನಮ್ಮಲ್ಲೂ ಗುಣಮಟ್ಟದ ಶಿಕ್ಷಣವನ್ನು ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ಶಿಕ್ಷಣ ನೀಡುತ್ತೇವೆ.ಪಾಲಕರು ಇಲ್ಲಿ ಓದಿ ಬುದ್ಧಿವಂತರಾದ ಮಕ್ಕಳನ್ನು ಬೇರೆ ಶಾಲೆಗಳಿಗೆ ಪ್ರವೇಶ ಪಡೆದುಕೊಳ್ಳಲು ಕಳಿಸುವ ಮುನ್ನ ಆಲೋಚನೆ ಮಾಡಬೇಕು ಎಂದು ಸಲಹೆ ಮಾಡಿದರು.

ಸಂಸ್ಥೆಯ ಆಡಳಿತಾಧಿಕಾರಿ ಕಿರಣ ಮದರಿ ಮಾತನಾಡಿ, ಪರೀಕ್ಷೆಯ ಸಮಯದಲ್ಲಿಯೇ ಹಿಂದಿ ಭಾಷೆಗೆ ಅಂಕಗಳ ಬದಲು ಗ್ರೇಡ್ ಪದ್ಧತಿ ಜಾರಿಗೊಳಿಸಲಾಗುವುದು ಎಂದು ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಅಲ್ಪ ವ್ಯತ್ಯಾಸವಾಗಿದೆ.ಮುಂಬರುವ ವರ್ಷಗಳಲ್ಲಿ ನಮ್ಮ ಶಾಲೆಗಳಿಂದ ರಾಜ್ಯಮಟ್ಟದ ಸಾಧನೆ ತೋರುವಂತಹ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳನ್ನು ಸಿದ್ಧ ಮಾಡುವುದಾಗಿ ತಿಳಿಸಿದರು.

ಸಂಸ್ಥೆಯ ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಮಾತನಾಡಿ, ಕಳೆದ ಆರು ವರ್ಷಗಳಲ್ಲಿ ನಮ್ಮ ಶಾಲೆಯ ಫಲಿತಾಂಶ ಅತ್ಯುತ್ತಮವಾಗಿ ಬಂದಿದೆ.ಇನ್ನಷ್ಟು ಪ್ರಯತ್ನ ಮಾಡಿದ್ದರೆ ಒಳ್ಳೆಯ ಸ್ಥಾನದಲ್ಲಿ ವಿದ್ಯಾರ್ಥಿಗಳು ಕಾಣಿಸಿಕೊಳ್ಳುತ್ತಿದ್ದರು.ಆದರೂ ಇಂತಹ ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳನ್ನು ಕರೆತಂದು ಗುಣಮಟ್ಟದ ಶಿಕ್ಷಣ ಶಿಕ್ಷಕರು ನೀಡಿದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದರು. ಸಂಸ್ಥೆಯ ನಿರ್ದೇಶಕರಾದ ಶ್ರೀದೇವಿ ಮದರಿ, ಸಲಹೆಗಾರರಾದ ರವಿ ಜಗಲಿ,ಬಸವರಾಜ ಗೂಡ್ಲಮನಿ, ಆಕಾಶ ಮದರಿ, ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆ ಮುಖ್ಯ ಗುರುಗಳಾದ ಪ್ರಶಾಂತ ಬಿರಾದಾರ, ಭೀಮಣ್ಣ ಪೂಜಾರಿ, ಅಜಿತ್ ಸರ್,ಅಡಳಿತ ಅಧಿಕಾರಿ ಗೀತಾ ಹುರಕಡ್ಲಿ,ಕಾಲೇಜಿನ ಪ್ರಾಂಶುಪಾಲ ಎಂ.ಎA.ಧನ್ನೂರ, ವಿರೇಶ ಹುಲಿಕೇರಿ ಇದ್ದರು.

ಫಲಿತಾಂಶ ಇಂತಿದೆ:
ಪಟ್ಟು ಪರೀಕ್ಷೆಗೆ ಕೂತಿದ್ದ 191 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದಾರೆ. ಶೇ.95ಕ್ಕೂ ಅಧಿಕ 11,ಶೇ.90ಕ್ಕೂ ಅಧಿಕ 33,ಡಿಸ್ಟಿಂಕ್ಷನ್ 74,ಪ್ರಥಮ ದರ್ಜೆ 113,ಎರಡನೇ ಸ್ಥಾನ 4 ಪಡೆದುಕೊಂಡಿದ್ದಾರೆ.ಅದರಲ್ಲಿ ಶ್ರೀನಿಧಿ ಬಡಿಗೇರ 616 ಅಂಕ ಪಡೆದು ಶಾಲೆಗೆ ಪ್ರಥಮ ರಾಜ್ಯಕ್ಕೆ ಎಂಟನೇ ಸ್ಥಾನ,ಸಿದ್ರಾಯ ಬಾಲರೆಡ್ಡಿ 610 ಅಂಕ ಪಡೆದು ದ್ವಿತೀಯ,ಮಲ್ಲಪ್ಪ ಗುಂಡಕನಾಳ 609 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.ಶೇ.90ಕ್ಕೂ ಅಧಿಕ ಅಂಕ ಪಡೆದುಕೊಂಡ ವಿದ್ಯಾರ್ಥಿಗಳನ್ನು ಸಂಸ್ಥೆಯಿOದ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ಸಂಸ್ಥೆಯ,ಶಾಲೆಯ ಬಗ್ಗೆ ವಿದ್ಯಾರ್ಥಿಗಳು,ಪಾಲಕರು ಅನಿಸಿಕೆ ಹಂಚಿಕೊOಡರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,