ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ ಜಕಾತ್‌ನಂತಹ ಧಾರ್ಮಿಕ ವಿಧಿಗಳನ್ನು ಪೂರೈಸಿರುತ್ತಾರೋ, ಬಡವರಿಗೆ ದಾನ ಧರ್ಮಗಳನ್ನು ಮಾಡಿರುತ್ತಾರೋ, ಅಂತಹವರಿಗೆ ಮಾತ್ರ ಈದ್ಗಾಗೆ ಪ್ರವೇಶಿಸುವ ಮತ್ತು ರಂಜಾನ್ ಹಬ್ಬವನ್ನು ಆಚರಿಸುವ ನೈತಿಕ ಹಕ್ಕಿದೆ ಎಂದು ಜಾಮಿಯಾ ಮಸೀದಿಯ ಪೇಶ ಇಮಾಮ್ ಪ್ರತಿಪಾದಿಸಿದರು.

ಪಟ್ಟಣದ ತಾಳಿಕೋಟಿ ರಸ್ತೆಯ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಈದ್ ಅಲ್-ಫಿತರ್ ರಂಜಾನ್ ಸಾಮೂಹಿಕ ನಮಾಜಿನ ನಂತರ ನೆರೆದಿದ್ದ ಮುಸ್ಲಿಂ ಬಾಂಧವರನ್ನು ಉದ್ದೇಶಿಸಿ ಅವರು ಮಾತನಾಡಿದರು.

“ರಂಜಾನ್ ಕೇವಲ ಉಪವಾಸಕ್ಕೆ ಸೀಮಿತವಾಗಿಲ್ಲ. ಇದು ಆತ್ಮಾವಲೋಕನ ಮತ್ತು ದಾನದ ಮಾಸವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಹಸಿವನ್ನು ನೀಗಿಸುವ ‘ಜಕಾತ್’ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರು ನಿಜವಾದ ಹಬ್ಬದ ಸಂಭ್ರಮಕ್ಕೆ ಅರ್ಹರು. ದೇವರ ಮೇಲಿನ ಭಕ್ತಿ ಹಾಗೂ ಬಡವರ ಮೇಲಿನ ಕರುಣೆ ಹೊಂದಿರುವವರು ಈ ಪವಿತ್ರ ಈದ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಸಾರ್ಥಕತೆ ಪಡೆಯುತ್ತಾರೆ” ಎಂದು ಅವರು ತಿಳಿಸಿದರು.

ನಗರದ ಎಲ್ಲಾ ಮಸೀದಿಗಳಿಂದ ಕಿಲ್ಲಾಗಲ್ಲಿಯ ಜುಮ್ಮಾ ಮಸೀದಿಯಲ್ಲಿ ಕೂಡಿದ ಜಮಾತಗಳನ್ನು ಸಾಮೂಹಿಕವಾಗಿ ತಕಬೀರ್ ಹೇಳುತ್ತಾ ಈದ್ಗಾ ಮೈದಾನಕ್ಕೆ ಆಗಮಿಸಿದರು.
ತಾಳಿಕೋಟಿ ರಸ್ತೆಯ ಈದ್ಗಾದಲ್ಲಿ ನಡೆದ ಈ ಸಾಮೂಹಿಕ ನಮಾಜಿನಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಪೊಲೀಸ್ ಸಿಬ್ಬಂದಿ ಭದ್ರತೆ ಒದಗಿಸಿದ್ದರು.

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು