ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು.
ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ಮಾಡಿದರು.
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ,ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಸಜ್ಜನ,ಕ್ರೀಡಾಧ್ವಜಾರೋಹಣ ನೆರವೇರಿಸಿದ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ,ಸಹಾಯಕ ಕ್ರೀಡಾಧಿಕಾರಿ ಹಣಮಗೌಡ ಪೀರಾಪೂರ,ದೈಹಿಕ ಶಿಕ್ಷಕ ಸಂಘದ ಸದಸ್ಯ ಎಂ.ಎಸ್.ಪಾಟೀಲ ಇದ್ದರು.
ಇದೇ ವೇಳೆ ವಿಶೇಷ ಸಾಧನೆ ತೋರಿದ ದೈಹಿಕ ಶಿಕ್ಷಕ ವಿ.ಎಸ್.ತೆಗ್ಗಿ ಅವರನ್ನು ಸನ್ಮಾನಿಸಲಾಯಿತು.ಎಂ.ಸಿ.ಕಮ್ಮಾರ ಸ್ವಾಗತಿಸಿದರು.ರಮೇಶ ಮಠಪತಿ ನಿರೂಪಿಸಿದರು.ಉಮೇಶ ಕೋನರೆಡ್ಡಿ ವಂದಿಸಿದರು.ತಾಲ್ಲೂಕಿನ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.







