PDO of Baradevana who swallowed documents and drank water

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ದಾಖಲೆಗಳನ್ನು ನುಂಗಿ ನೀರು ಕುಡಿದ ಬರದೇವನಾಳ ಪಿಡಿಓ

ಬರದೇವನಾಳ: ಹುಣಸಗಿ ತಾಲೂಕಿನ ಬರದೇವನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ.

ಭ್ರಷ್ಟಾಚಾರ ನಡೆಸಿರುವ ಹಿನ್ನಲೆಯಲ್ಲಿ ಪಿ.ಡಿ.ಓ ಅವರು ಮೇಲಧಿಕಾರಿಗಳ ವಿಚಾರಣೆಯಲ್ಲಿ ಯಾವದೇ ಮಾಹಿತಿಯನ್ನು ಸಲ್ಲಿಸಿಲ್ಲ. ಬರದೇವನಾಳ ಗ್ರಾ.ಪಂ.ಯಲ್ಲಿ ನಡೆದ ಅವ್ಯವಹಾರದ ಕುರಿತು ಇ.ಓ . ರವರು ಖುದ್ದಾಗಿ ಗ್ರಾ.ಪಂ.ಗೆ ಭೇಟಿ ನೀಡಿ, ವಿಚಾರಣೆ ಕೈಗೊಂಡಿದ್ದಾರೆ. ವೀರಯ್ಯ ಹಿರೇಮಠರವರು ಯಾವುದೇ ದಾಖಲೆಗಳು ಸಲ್ಲಿಸಿರುವುದಿಲ್ಲ. ಆದರೆ ಜೊತೆಗೆ ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಗಿ ಇವರು ನಗದು ಪುಸ್ತಕ, ಕ್ರಿಯಾ ಯೋಜನೆ, ಬ್ಯಾಂಕ್ ಸೈಟಿಮೆಂಟ್ ಒದಗಿಸಿದ್ದು, ಆದರೆ 15 ನೇ ಹಣಕಾಸು ಕ್ರಿಯಾ ಯೋಜನೆ ಸಲ್ಲಿಸಿರುವುದಿಲ್ಲ.

ಕೂಡಲೇ ವೀರಯ್ಯ ಹಿರೇಮಠ, ಹಣಮಂತಪ್ಪ ಹೆಗ್ಗರ, ಮಲ್ಲೇಶಪ್ಪಗೌಡ, ಹೊನ್ನಪ್ಪ ಚಿಕ್ಕನಟಿಗಿ ಇವರನ್ನು ಅಮಾನತ್ತುಗೊಳಿಸುಬೇಕು ಎಂದು ಹುಣಸಗಿ ತಾಲೂಕ ಅಧ್ಯಕ್ಷರು ಪ್ರಭು ಗೌಡ ಫೋತರೆಡ್ಡಿಯವರು ಯಾದಗಿರಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲೂಯಿಸ್ ಓಡಿಯರವರಿಗೆ ಮನವಿ ಸಲ್ಲಿಸಿದರು

ಈ ಸಂದರ್ಭದಲ್ಲಿ ಶಹಾಪುರ ತಾಲೂಕ ಅಧ್ಯಕ್ಷರು ಸೋಪಣ್ಣ ಹಳಿಸಗರ್ ಜಿಲ್ಲಾ ಸಂಚಾಲಕರು ನಾಗರಾಜ್ ಭೀಮಣ್ಣ ಶಹಾಪುರ ತಾಲೂಕು ಗೌರವ ಅಧ್ಯಕ್ಷರು ಮರಿಯಪ್ಪ ಬಿದರರಾಣಿ ಶಹಾಪುರ ತಾಲೂಕ ಉಪಾಧ್ಯಕ್ಷರು ಶ್ರೀಮಂತ್ ಉಪಸ್ಥಿತರಿದ್ದರು.

ವರದಿ : ಶಿವು ರಾಠೋಡ

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ