ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaih) ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.
Join Our Telegram: https://t.me/dcgkannada
“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.
“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)
ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ (CM Siddaramaih) ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರು
ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅಬರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.