Persuasion of wife who asked for alimony: Lok Adalat united the couple

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪರಿಹರಿಸಲಾಗಿದ್ದು ನ್ಯಾಯಾಲಯ ಇಬ್ಬರನ್ನು ಒಂದುಗೂಡಿಸಿ ಸಹಬಾಳ್ವೆಗೆ ಅವಕಾಶ ಮಾಡಿಕೊಟ್ಟಿದೆ.

ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.ಲೋಕ ಅದಾಲತ್‌ನಲ್ಲಿ ಸಿವಿಲ್ ನ್ಯಾಯಾಲಯದ ಒಂದು ಕೌಟುಂಬಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಗಂಡ ಹೆಂಡತಿಯನ್ನು ಒಂದುಗೂಡಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಲಾಯಿತು. ಬ.ಬಾಗೇವಾಡಿ ತಾಲ್ಲೂಕು ಉಪ್ಪಲದಿನ್ನಿ ತಾಂಡಾದ ನಿವಾಸಿ ನಾಮದೇವ ಬಾಬು ರಾಠೋಡ ಹಾಗೂ ಕೋಳೂರು ತಾಂಡಾದ ಅಶ್ವಿನಿ ನಾಮದೇವ ರಾಠೋಡ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಅಶ್ವಿನಿ ಅವರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಜೀವನಾಂಶ ಕೊಡಿಸುವಂತೆ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಅವರು ಪರಿಹರಿಸಿ ದಂಪತಿಗಳಿಬ್ಬರನ್ನು ಒಂದುಗೂಡಿಸಿದರು. ಅಲ್ಲದೇ ನ್ಯಾಯಾಲಯದಲ್ಲಿ ದಂಪತಿಗಳಿಬ್ಬರು ಪರಸ್ಪರ ಹೂವಿನ ಮಾಲೆ ಹಾಕಿ ಸಿಹಿ ತಿನ್ನಿಸಿ ಪ್ರಕರಣ ಇತ್ಯರ್ಥಕ್ಕೆ ಸಹಕಾರ ನೀಡಿದರು.ಉಭಯ ಕಕ್ಷಿದಾರರ ಪರ ವಕೀಲರಾದ ಎಸ್.ಎಸ್.ಮಾಲಗತ್ತಿ, ಎಸ್.ಸಿ.ಹಿರೇಮಠ ಇದ್ದರು.

ಇನ್ನುಳಿದಂತೆ ಲೋಕ ಅದಾಲತ್‌ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು 7771 ಬಾಕಿ ಇರುವ ಪ್ರಕರಣಗಳಲ್ಲಿ 2370 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.ಒಟ್ಟು 1979 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಪೂರ್ವದಾವೆ ಪ್ರಕರಣಗಳಲ್ಲಿ ಒಟ್ಟು 1866 ಪ್ರಕರಣಗಳಲ್ಲಿ 897 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.

ಲೋಕ ಅದಾಲತ್‌ನಲ್ಲಿ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟೀಮನಿ, ಸಂಧಾನಕಾರರಾಗಿ ವಕೀಲರಾದ ಶೋಭಾ ಪಾಟೀಲ, ರೇಣುಕಾ ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ, ತಾಲೂಕಾ ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕರು, ನ್ಯಾಯಾಲಯ ಸಿಬ್ಬಂದಿ, ಹಿರಿಯ , ಕಿರಿಯ ವಕೀಲರು ಪಾಲ್ಗೊಂಡಿದ್ದರು.

Latest News

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕೂಡು ಗಾಡಿ ಸ್ಪರ್ಧೆಯಲ್ಲಿ

ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ಮುದ್ದೇಬಿಹಾಳ : ತಂಬಾಕು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ವಸ್ತುವಾಗಿದ್ದು ಅದನ್ನು ತೃಜಿಸುವುದರಿಂದ ಹಣ

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ಕುಳಗೇರಿ ಕ್ರಾಸ್: ಮೂರು ವರ್ಷದ ಮಗು ಜೊತೆ ದೇವರ ದರ್ಶನಕ್ಕೆ ಹೊರಟಿದ್ದ ತಂದೆ ರತೆ

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ನಾಗಬೇನಾಳ ತಾಂಡಾ: ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಗಬೇನಾಳ ತಾಂಡಾದಲ್ಲಿ ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ ಮಾಡಲಾಯಿತು. ಮಕ್ಕಳಿಗೆ ಬೇಸಿಗೆ ರಜೆಗಳ ನಂತರ ಇಂದು ಶಾಲೆಗೆ ಬರುವ ಮುದ್ದು ಮಕ್ಕಳನ್ನು ಹೂಗುಚ್ಛ ಕೊಟ್ಟು ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ನಾಗಬೇನಾಳ ತಾಂಡಾದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತು ದೇಶ ಸೇವೆ ಮಾಡುತ್ತಿರುವ ಸೈನಿಕರಾದ ವೆಂಕಟೇಶ ಸೇವಪ್ಪ ನಾಯಕ್, ರಾಜು ಕೀರಪ್ಪ. ಚವಾಣ್ ಇವರಿಗೆ ಗೌರವ ಸನ್ಮಾನ ಮಾಡಲಾಯಿತು. ಇದೇ

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಮುದ್ದೇಬಿಹಾಳ : ಭೋವಿ ವಡ್ಡರ ಸಮಾಜದಲ್ಲಿ ಸಾಂಪ್ರದಾಯಿಕ ಕುಲಕಸುಬು ಪ್ರಧಾನವಾಗಿದ್ದರೂ ಸಮಾಜದ ಬಾಂಧವರ ಮಕ್ಕಳು ಶೈಕ್ಷಣಿಕವಾಗಿಯೂ ಉನ್ನತ ಗುರಿ ಇಟ್ಟುಕೊಂಡು ಸಾಧನೆ ತೋರಬೇಕು ಎಂದು ಅಖಿಲ ಕರ್ನಾಟಕ ಭೋವಿ(ವಡ್ಡರ) ಯುವ ವೇದಿಕೆ ತಾಲೂಕಾ ಘಟಕದ ಉಪಾಧ್ಯಕ್ಷ ಹಣಮಂತ ಯ.ಭೈರವಾಡಗಿ ಹೇಳಿದರು. ತಾಲೂಕಿನ ಢವಳಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಢವಳಗಿ ಗ್ರಾಮದ ವಡ್ಡರ ಸಮಾಜ ಹಾಗೂ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುದ್ದೇಬಿಹಾಳ ತಾಲೂಕಾ