ಶಿಸ್ತು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ: ಸಿಡಿಪಿಒ ಅನುಚಿತ ನಡೆಗೆ ಮಹಿಳೆಯರ ಆಕ್ರೋಶ

ಶಿಸ್ತು ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ: ಸಿಡಿಪಿಒ ಅನುಚಿತ ನಡೆಗೆ ಮಹಿಳೆಯರ ಆಕ್ರೋಶ

ಮುದ್ದೇಬಿಹಾಳ : ಸಾರ್ವಜನಿಕವಾಗಿ ಮಾಹಿತಿ ಕೇಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಹೋದರೆ ಅಲ್ಲಿರುವ ಅಧಿಕಾರಿ ಶಿವಮೂರ್ತಿ ಕುಂಬಾರ ಮಹಿಳೆಯರೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಗುರುವಾರ ಪಟ್ಟಣದಲ್ಲಿ ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರರ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊAಡ ಪ್ರತಿಭಟನೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿಗೆ ಆಗಮಿಸಿತು.ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರ್ತಿ ಮುನ್ನಿ ಮುಲ್ಲಾ, ಉತ್ತರ ಕರ್ನಾಟಕ ರೈತ ಹಾಗೂ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷೆ ರಜಿಯಾ ನದಾಫ , ಅವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗರ್ಭಿಣಿಯರಿಗೆ, ಬಾಣಂತಿಯರಿಗೆ ಮಕ್ಕಳಿಗೆ ಕೊಡುವ ಸೌಲಭ್ಯಗಳ ಮಾಹಿತಿ ಕೇಳಲು ಹೋದರೆ ಕಚೇರಿಯಿಂದ ಹೊರಗೆ ಹಾಕುವಂತೆ ತಮ್ಮ ಕೆಲಸಗಾರರಿಗೆ ಹೇಳುತ್ತಾರೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಸರಿಯಾಗಿ ಮೊಟ್ಟೆ ಕೊಡುತ್ತಿಲ್ಲ ಎಂದು ವಿಚಾರಿಸಲು ಹೋದರೆ ಅವಾಚ್ಯ ಶಬ್ದಗಳಿಂದ ನಿಂದಿಸುವುದಲ್ಲದೇ ನಮ್ಮ ಇಲಾಖೆಯಲ್ಲಿ ನಾನು ಮಾಡಿದ್ದೇ ಕಾನೂನು ಎಂದು ಸರ್ವಾಧಿಕಾರದಿಂದ ಮಾತನಾಡುತ್ತಾರೆ.ಇಂತಹ ಅಧಿಕಾರಿಯನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೇ ಮಹಿಳಾ ಪತ್ರಕರ್ತೆಯೊಂದಿಗೂ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ದೂರಿದರು.

ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮನವಿ ಪತ್ರ ಸ್ವೀಕರಿಸಿದರು.ವಾಲ್ಮೀಕಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಭೀಮಬಾಯಿ ಹತ್ತೂರ, ದಲಿತ ಮುಖಂಡ ಸಂಗಪ್ಪ ಚಲವಾದಿ,ರೇಣುಕಾ ಚಲವಾದಿ, ಸುಮಿತ್ರಾ ತಳವಾರ,ಶಾಮಲಾ ಚಲವಾದಿ,ಸುಧಾ ಮುರಾಳ,ಕಮಲವ್ವ ತಳವಾರ,ರೇಣುಕಾ ಕುಂಟೋಜಿ,ಬಸವ್ವ ಮಾದರ,ಅರುಣ ದಾಸರ,ಕೃಷ್ಣ ದಾಸರ, ಪ್ರಕಾಶ ಛಲವಾದಿ ಮೊದಲಾದವರು ಇದ್ದರು.

Latest News

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ:               ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್

ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಮುದ್ದೇಬಿಹಾಳ : ಕಳೆದ ತಿಂಗಳು ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಇರುವ ಕಾಲುವೆಗೆ ಬಟ್ಟೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಅಂಗವಾಗಿ ವಿವಿಧೆಡೆಯಿಂದ ಬಂದಿದ್ದ ಸಾಧು ಸಂತರಿಗೆ ಗೌರವ ಸಲ್ಲಿಸಲಾಯಿತು.ಗುರು ದತ್ತಾತ್ರೇಯರ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ನಡೆಸಲಾಯಿತು. ಶಾಲೆಯ ಮುಖ್ಯಗುರುಗಳು,ಶಿಕ್ಷಕರು,ಸಿಬ್ಬಂದಿ ಪಾಲ್ಗೊಂಡಿದ್ದರು.ಇಸ್ಮಾಯಿಲ್ ಮನಿಯಾರ,ಗುರಿಕಾರ ಸರ್, ಶಿಕ್ಷಕರು ಇದ್ದರು.

ಶರಣ ಬೆಳಗು ಕಾರ್ಯಕ್ರಮ:                                               ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ ನೇತೃತ್ವದಲ್ಲಿ ಲಿಂ.ಪರಮಾನAದ ಮಸ್ಕಿ ಹಾಗೂ ಭುವನೇಶ ಕಟಗೇರಿ ಸ್ಮರಣಾರ್ಥ ಗುರುವಾರ ಏರ್ಪಡಿಸಿದ್ದ ಶರಣ ಬೆಳಗು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಸವಣ್ಣನವರ