ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್ಬಾಲ್ ಕ್ರಿಕೇಟ್ ಟೂರ್ನಾಮೆಂಟ್ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಆರೋಗ್ಯದ ಕಡೆ ಲಕ್ಷö್ಯವಿಟ್ಟು ಕ್ರೀಡಾಸ್ಫೂರ್ತಿಯಿಂದ ಆಟವಾಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಎಂಬಿಎಲ್ ಗ್ರೂಪ್ಸ್ನಿಂದ ಚಾಂಪಿಯನ್ ಟ್ರೋಫಿ-2026 ಹಾರ್ಡಬಾಲ್ ಟೆನ್ನಿಸ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗೆಳೆಯರ ಬಳಗದಿಂದ ಆಯೋಜಿಸಿದ ಕ್ರಿಕೇಟ್ ಟೂರ್ನಾಮೆಂಟ್ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ ಕ್ರಿಕೇಟ್ ಪಂದ್ಯಾವಳಿ ಯಶಸ್ವಿಯಾಗಿ ಸಾಗಲಿ ಎಂದು ಶುಭಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, ಪಂಚಮಸಾಲಿ ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಸದು ಮಠ,ಕೆಯುಸಿ ಬ್ಯಾಂಕ್ ಉಪಾಧ್ಯಕ್ಷ ಶ್ರೀಕಾಂತ ಚಲವಾದಿ, ಮುಖಂಡ ಹುಸೇನ್ ಮುಲ್ಲಾ,ಸಂಗಣ್ಣ ಮೇಲಿನಮನಿ, ಜಾವೇದ ಇನಾಮದಾರ,ಮೊಹ್ಮದರಫೀಕ ಶಿರೋಳ,ರಂಜಾನ್ ನದಾಫ,ಯಲ್ಲಪ್ಪ ಮ್ಯಾಗೇರಿ ಮೊದಲಾದವರು ಇದ್ದರು.
ಆಟದ ಸಮಯ ಬದಲಾವಣೆಗೆ ಒತ್ತಾಯ:
ಉತ್ತರ ಕರ್ನಾಟಕ ಭಾಗದಲ್ಲಿ ಬೇಸಿಗೆ ಸಮಯವಾಗಿದ್ದು 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ಸಮಯದಲ್ಲಿ ಹಾರ್ಡ್ಬಾಲ್ ಟೆನ್ನಿಸ್ ಕ್ರಿಕೇಟ್ ಟೂರ್ನಾಮೆಂಟ್ ಆಯೋಜನೆ ಮಾಡಿರುವುದು ಆಟಗಾರರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ.ಕೆಲವೆಡೆ ಬಿಸಿಲಿನ ಪ್ರಖರತೆಯಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಹಗಲು ಹೊತ್ತಿನಲ್ಲಿ ಅದು ಭಾರೀ ಬಿಸಿಲಿನ ಸಮಯದಲ್ಲಿ ಕ್ರಿಕೆಟ್ ಆಟವಾಡಿಸುವುದು ಅಗತ್ಯವಿತ್ತೇ ಎಂಬ ಮಾತುಗಳು ಕೇಳಿ ಬಂದಿವೆ.ಆಟದ ಸಮಯವನ್ನು ಬದಲಾಯಿಸಬೇಕು ಎಂದು ತಂಡಗಳ ಆಟಗಾರರು ಒತ್ತಾಯಿಸಿದ್ದಾರೆ.







