PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

ವಯನಾಡ್: ತೀವ್ರ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದ ನೂರಾರು ಜನರ ಸಾವಿಗೆ ಸಾಕ್ಷಿಯಾದ ಕೇರಳದ ವಯಾನಾಡುಗೆ 15 ದಿನಗಳ ಪ್ರಧಾನಿ ನರೇಂದ್ರ ಭೇಟಿ ನೀಡಿದ್ದು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ತೀವ್ರ ಭೂಕುಸಿತದಿಂದ ಸಾವು, ನೋವುಗಳಾಗಿ ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದರು, ಪ್ರಧಾನಿ ಮೋದಿ ಅವರು ವಯನಾಡುಗೆ ಭೇಟಿ ನೀಡದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಇಂದು ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕ್ಕೆ ಪ್ರದೇಶಗಳಿಗೆ ಮೋದಿ (PM modi) ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಇದೇ ವೇಳೆ ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ(PM modi) ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ.

ದುರಂತದಿಂದ ಆಪ್ತರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಭೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಂತರ ಮಾತನಾಡಿದ ಅವರು, ಸಾವಿರಾರು ಪರಿವಾರದ ಕನಸು ನುಚ್ಚುನೂರಾಗಿದೆ. ಪ್ರಕೃತಿ ರೌದ್ರ ರೂಪ ತೋರಿಸಿದೆ. ನಾನು ಆ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಜೊತೆಗೆ ಸಂತ್ರಸ್ತರ ಕೇಂದ್ರಗಳಿಗೂ ಭೇಟಿ ನೀಡಿ ಸಂತ್ರಸ್ತರಿಂದ ಎಲ್ಲಾ ವಿವರಗಳನ್ನು ಕೇಳಿದ್ದೇನೆ. ಆಸ್ಪತ್ರೆಯಲ್ಲೂ ಗಾಯಾಳುಗಳು ಕಷ್ಟದ ಪರಿಸ್ಥಿತಿಯನ್ನು ನೋಡಿದ್ದೇನೆ.

ನಮಗೆ ದುರ್ಘಟನೆಯಲ್ಲಿ ಮಡಿದ ಜನರನ್ನು ವಾಪಸ್ ತರಲು ಸಾಧ್ಯವಿಲ್ಲ. ಆದರೆ ಅಲ್ಲಿನ ಸಂತ್ರಸ್ತರಿಗೆ ಭವಿಷ್ಯಕ್ಕೆ ಸಹಾಯವನ್ನು ಮಾಡುತ್ತೇವೆ. ದೇಶ ಹಾಗೂ ಕೇಂದ್ರ ಸರ್ಕಾರ ಇಲ್ಲಿನ ಜನರ ಜೊತೆ ಇದ್ದೇವೆ. ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ.

ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ ಎಂದರು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ