PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

ವಯನಾಡ್: ತೀವ್ರ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದ ನೂರಾರು ಜನರ ಸಾವಿಗೆ ಸಾಕ್ಷಿಯಾದ ಕೇರಳದ ವಯಾನಾಡುಗೆ 15 ದಿನಗಳ ಪ್ರಧಾನಿ ನರೇಂದ್ರ ಭೇಟಿ ನೀಡಿದ್ದು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ತೀವ್ರ ಭೂಕುಸಿತದಿಂದ ಸಾವು, ನೋವುಗಳಾಗಿ ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದರು, ಪ್ರಧಾನಿ ಮೋದಿ ಅವರು ವಯನಾಡುಗೆ ಭೇಟಿ ನೀಡದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಇಂದು ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕ್ಕೆ ಪ್ರದೇಶಗಳಿಗೆ ಮೋದಿ (PM modi) ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಇದೇ ವೇಳೆ ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ(PM modi) ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ.

ದುರಂತದಿಂದ ಆಪ್ತರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಭೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಂತರ ಮಾತನಾಡಿದ ಅವರು, ಸಾವಿರಾರು ಪರಿವಾರದ ಕನಸು ನುಚ್ಚುನೂರಾಗಿದೆ. ಪ್ರಕೃತಿ ರೌದ್ರ ರೂಪ ತೋರಿಸಿದೆ. ನಾನು ಆ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಜೊತೆಗೆ ಸಂತ್ರಸ್ತರ ಕೇಂದ್ರಗಳಿಗೂ ಭೇಟಿ ನೀಡಿ ಸಂತ್ರಸ್ತರಿಂದ ಎಲ್ಲಾ ವಿವರಗಳನ್ನು ಕೇಳಿದ್ದೇನೆ. ಆಸ್ಪತ್ರೆಯಲ್ಲೂ ಗಾಯಾಳುಗಳು ಕಷ್ಟದ ಪರಿಸ್ಥಿತಿಯನ್ನು ನೋಡಿದ್ದೇನೆ.

ನಮಗೆ ದುರ್ಘಟನೆಯಲ್ಲಿ ಮಡಿದ ಜನರನ್ನು ವಾಪಸ್ ತರಲು ಸಾಧ್ಯವಿಲ್ಲ. ಆದರೆ ಅಲ್ಲಿನ ಸಂತ್ರಸ್ತರಿಗೆ ಭವಿಷ್ಯಕ್ಕೆ ಸಹಾಯವನ್ನು ಮಾಡುತ್ತೇವೆ. ದೇಶ ಹಾಗೂ ಕೇಂದ್ರ ಸರ್ಕಾರ ಇಲ್ಲಿನ ಜನರ ಜೊತೆ ಇದ್ದೇವೆ. ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ.

ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ ಎಂದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು