Police lathi charge: Crowds flocked to DJ folk fair

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ, ಸಿದ್ಧರಾಜ ಹೊಳಿ ಮೊದಲಾದವರು ದಾಂಧಲೆ ಎಬ್ಬಿಸುತ್ತಿದ್ದವರಿಗೆ ಹಲವು ಬಗೆಯಲ್ಲಿ ತಿಳಿ ಹೇಳಿದರು.

ಕಮೀಟಿಯವರ ಮಾತು ಕೇಳದೇ ಗದ್ದಲ ಮುಂದುವರೆದಾಗ ಅನಿವಾರ್ಯವಾಗಿ ಪೊಲೀಸರು ಲಘುವಾಗಿ ಗುಂಪಿನತ್ತ ಲಾಠಿ ಬೀಸಿದರು. ಇದರಿಂದ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಪಿಎಸ್‌ಐ ಸಂಜಯ ತಿಪರೆಡ್ಡಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಬಳಿಕ ಕಾರ್ಯಕ್ರಮ ಯಥಾಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನವಯುಗದ ಜಾನಪದ ಡಿಜೆ ಗಾಯಕರಾದ ಮ್ಯೂಜಿಕ್ ಮೈಲಾರಿ, ಮಾಳು ನಿಪನಾಳ, ಮುತ್ತು ಹಳಿಯಾಳ, ಲಕ್ಷ್ಮಿ ವಿಜಯಪುರ, ಸುದೀಪ ಹೆಳವರ, ತೃಪ್ತಿ ಧಾರವಾಡ, ಸಂಜನಾ, ಪರಸು ಕೋಲೂರ ಮೊದಲಾದವರು ನೆರೆದಿದ್ದ ಜನರಿಗೆ ತಮ್ಮದೇ ಶೈಲಿಯಲ್ಲಿ ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ ತಮ್ಮ ಜೇಬಿನಿಂದ ಐದು ನೂರು ರೂ.ಕೊಟ್ಟು ಹಳೆಯ ಕಾಲದ ಬಾಳ ಬಂಗಾರ ನೀನು, ಮನೆಯ ಸಿಂಗಾರ ನೀನು ಹಾಡನ್ನು ಜಾನಪದ ಕಲಾವಿದರಿಂದ ಹಾಡಿಸಿದ್ದು ಗಮನ ಸೆಳೆಯಿತು. ಸ್ಥಳೀಯ ಕಲಾವಿದರಾದ ಶ್ರೀಶೈಲ ಹೂಗಾರ, ಗೋಪಾಲ ಹೂಗಾರ, ಚಂದ್ರು ಕಲಾಲ ಮೊದಲಾದವರು ವೇದಿಕೆ ನಿರ್ವಹಣೆ ಮಾಡಿದರು. ಸುಮಾರು 20 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಮಧ್ಯರಾತ್ರಿ 2 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು. ಕೆಲವರು ಪುರಸಭೆಯ ಹಳೆಯ ಕಾಲದ ಮಳಿಗೆಗಳ ಶಿಥಿಲ ಛಾವಣಿ ಮೇಲೆ ಕೂತು ಸಂಘಟಕರಿಗೆ ಆತಂಕವನ್ನುಂಟು ಮಾಡಿದ ಪ್ರಸಂಗವೂ ನಡೆಯಿತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು