Police lathi charge: Crowds flocked to DJ folk fair

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ, ಸಿದ್ಧರಾಜ ಹೊಳಿ ಮೊದಲಾದವರು ದಾಂಧಲೆ ಎಬ್ಬಿಸುತ್ತಿದ್ದವರಿಗೆ ಹಲವು ಬಗೆಯಲ್ಲಿ ತಿಳಿ ಹೇಳಿದರು.

ಕಮೀಟಿಯವರ ಮಾತು ಕೇಳದೇ ಗದ್ದಲ ಮುಂದುವರೆದಾಗ ಅನಿವಾರ್ಯವಾಗಿ ಪೊಲೀಸರು ಲಘುವಾಗಿ ಗುಂಪಿನತ್ತ ಲಾಠಿ ಬೀಸಿದರು. ಇದರಿಂದ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಪಿಎಸ್‌ಐ ಸಂಜಯ ತಿಪರೆಡ್ಡಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಬಳಿಕ ಕಾರ್ಯಕ್ರಮ ಯಥಾಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನವಯುಗದ ಜಾನಪದ ಡಿಜೆ ಗಾಯಕರಾದ ಮ್ಯೂಜಿಕ್ ಮೈಲಾರಿ, ಮಾಳು ನಿಪನಾಳ, ಮುತ್ತು ಹಳಿಯಾಳ, ಲಕ್ಷ್ಮಿ ವಿಜಯಪುರ, ಸುದೀಪ ಹೆಳವರ, ತೃಪ್ತಿ ಧಾರವಾಡ, ಸಂಜನಾ, ಪರಸು ಕೋಲೂರ ಮೊದಲಾದವರು ನೆರೆದಿದ್ದ ಜನರಿಗೆ ತಮ್ಮದೇ ಶೈಲಿಯಲ್ಲಿ ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ ತಮ್ಮ ಜೇಬಿನಿಂದ ಐದು ನೂರು ರೂ.ಕೊಟ್ಟು ಹಳೆಯ ಕಾಲದ ಬಾಳ ಬಂಗಾರ ನೀನು, ಮನೆಯ ಸಿಂಗಾರ ನೀನು ಹಾಡನ್ನು ಜಾನಪದ ಕಲಾವಿದರಿಂದ ಹಾಡಿಸಿದ್ದು ಗಮನ ಸೆಳೆಯಿತು. ಸ್ಥಳೀಯ ಕಲಾವಿದರಾದ ಶ್ರೀಶೈಲ ಹೂಗಾರ, ಗೋಪಾಲ ಹೂಗಾರ, ಚಂದ್ರು ಕಲಾಲ ಮೊದಲಾದವರು ವೇದಿಕೆ ನಿರ್ವಹಣೆ ಮಾಡಿದರು. ಸುಮಾರು 20 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಮಧ್ಯರಾತ್ರಿ 2 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು. ಕೆಲವರು ಪುರಸಭೆಯ ಹಳೆಯ ಕಾಲದ ಮಳಿಗೆಗಳ ಶಿಥಿಲ ಛಾವಣಿ ಮೇಲೆ ಕೂತು ಸಂಘಟಕರಿಗೆ ಆತಂಕವನ್ನುಂಟು ಮಾಡಿದ ಪ್ರಸಂಗವೂ ನಡೆಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ