Police lathi charge: Crowds flocked to DJ folk fair

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ, ಸಿದ್ಧರಾಜ ಹೊಳಿ ಮೊದಲಾದವರು ದಾಂಧಲೆ ಎಬ್ಬಿಸುತ್ತಿದ್ದವರಿಗೆ ಹಲವು ಬಗೆಯಲ್ಲಿ ತಿಳಿ ಹೇಳಿದರು.

ಕಮೀಟಿಯವರ ಮಾತು ಕೇಳದೇ ಗದ್ದಲ ಮುಂದುವರೆದಾಗ ಅನಿವಾರ್ಯವಾಗಿ ಪೊಲೀಸರು ಲಘುವಾಗಿ ಗುಂಪಿನತ್ತ ಲಾಠಿ ಬೀಸಿದರು. ಇದರಿಂದ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಪಿಎಸ್‌ಐ ಸಂಜಯ ತಿಪರೆಡ್ಡಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಬಳಿಕ ಕಾರ್ಯಕ್ರಮ ಯಥಾಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನವಯುಗದ ಜಾನಪದ ಡಿಜೆ ಗಾಯಕರಾದ ಮ್ಯೂಜಿಕ್ ಮೈಲಾರಿ, ಮಾಳು ನಿಪನಾಳ, ಮುತ್ತು ಹಳಿಯಾಳ, ಲಕ್ಷ್ಮಿ ವಿಜಯಪುರ, ಸುದೀಪ ಹೆಳವರ, ತೃಪ್ತಿ ಧಾರವಾಡ, ಸಂಜನಾ, ಪರಸು ಕೋಲೂರ ಮೊದಲಾದವರು ನೆರೆದಿದ್ದ ಜನರಿಗೆ ತಮ್ಮದೇ ಶೈಲಿಯಲ್ಲಿ ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ ತಮ್ಮ ಜೇಬಿನಿಂದ ಐದು ನೂರು ರೂ.ಕೊಟ್ಟು ಹಳೆಯ ಕಾಲದ ಬಾಳ ಬಂಗಾರ ನೀನು, ಮನೆಯ ಸಿಂಗಾರ ನೀನು ಹಾಡನ್ನು ಜಾನಪದ ಕಲಾವಿದರಿಂದ ಹಾಡಿಸಿದ್ದು ಗಮನ ಸೆಳೆಯಿತು. ಸ್ಥಳೀಯ ಕಲಾವಿದರಾದ ಶ್ರೀಶೈಲ ಹೂಗಾರ, ಗೋಪಾಲ ಹೂಗಾರ, ಚಂದ್ರು ಕಲಾಲ ಮೊದಲಾದವರು ವೇದಿಕೆ ನಿರ್ವಹಣೆ ಮಾಡಿದರು. ಸುಮಾರು 20 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಮಧ್ಯರಾತ್ರಿ 2 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು. ಕೆಲವರು ಪುರಸಭೆಯ ಹಳೆಯ ಕಾಲದ ಮಳಿಗೆಗಳ ಶಿಥಿಲ ಛಾವಣಿ ಮೇಲೆ ಕೂತು ಸಂಘಟಕರಿಗೆ ಆತಂಕವನ್ನುಂಟು ಮಾಡಿದ ಪ್ರಸಂಗವೂ ನಡೆಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ