Police lathi charge: Crowds flocked to DJ folk fair

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ, ಸಿದ್ಧರಾಜ ಹೊಳಿ ಮೊದಲಾದವರು ದಾಂಧಲೆ ಎಬ್ಬಿಸುತ್ತಿದ್ದವರಿಗೆ ಹಲವು ಬಗೆಯಲ್ಲಿ ತಿಳಿ ಹೇಳಿದರು.

ಕಮೀಟಿಯವರ ಮಾತು ಕೇಳದೇ ಗದ್ದಲ ಮುಂದುವರೆದಾಗ ಅನಿವಾರ್ಯವಾಗಿ ಪೊಲೀಸರು ಲಘುವಾಗಿ ಗುಂಪಿನತ್ತ ಲಾಠಿ ಬೀಸಿದರು. ಇದರಿಂದ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಪಿಎಸ್‌ಐ ಸಂಜಯ ತಿಪರೆಡ್ಡಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಬಳಿಕ ಕಾರ್ಯಕ್ರಮ ಯಥಾಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನವಯುಗದ ಜಾನಪದ ಡಿಜೆ ಗಾಯಕರಾದ ಮ್ಯೂಜಿಕ್ ಮೈಲಾರಿ, ಮಾಳು ನಿಪನಾಳ, ಮುತ್ತು ಹಳಿಯಾಳ, ಲಕ್ಷ್ಮಿ ವಿಜಯಪುರ, ಸುದೀಪ ಹೆಳವರ, ತೃಪ್ತಿ ಧಾರವಾಡ, ಸಂಜನಾ, ಪರಸು ಕೋಲೂರ ಮೊದಲಾದವರು ನೆರೆದಿದ್ದ ಜನರಿಗೆ ತಮ್ಮದೇ ಶೈಲಿಯಲ್ಲಿ ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ ತಮ್ಮ ಜೇಬಿನಿಂದ ಐದು ನೂರು ರೂ.ಕೊಟ್ಟು ಹಳೆಯ ಕಾಲದ ಬಾಳ ಬಂಗಾರ ನೀನು, ಮನೆಯ ಸಿಂಗಾರ ನೀನು ಹಾಡನ್ನು ಜಾನಪದ ಕಲಾವಿದರಿಂದ ಹಾಡಿಸಿದ್ದು ಗಮನ ಸೆಳೆಯಿತು. ಸ್ಥಳೀಯ ಕಲಾವಿದರಾದ ಶ್ರೀಶೈಲ ಹೂಗಾರ, ಗೋಪಾಲ ಹೂಗಾರ, ಚಂದ್ರು ಕಲಾಲ ಮೊದಲಾದವರು ವೇದಿಕೆ ನಿರ್ವಹಣೆ ಮಾಡಿದರು. ಸುಮಾರು 20 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಮಧ್ಯರಾತ್ರಿ 2 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು. ಕೆಲವರು ಪುರಸಭೆಯ ಹಳೆಯ ಕಾಲದ ಮಳಿಗೆಗಳ ಶಿಥಿಲ ಛಾವಣಿ ಮೇಲೆ ಕೂತು ಸಂಘಟಕರಿಗೆ ಆತಂಕವನ್ನುಂಟು ಮಾಡಿದ ಪ್ರಸಂಗವೂ ನಡೆಯಿತು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು