POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ