POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು