POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ