POP Ganesh: An artist family in making an eco-friendly Ganesha idol

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

POP Ganesh: ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ಚಿತ್ರಗಾರ ಕುಟುಂಬ

ಲೇಖನ: ಹರೀಶ
ಪರಿಸರ ರಕ್ಷಣೆಗಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸರ್ಕಾರ ಹಾಗೂ ತಜ್ಞರು ಎಷ್ಟೇ ಹೇಳಿದರೂ ಮೂರ್ತಿಕಾರು ಮಾತ್ರ ಪರಿಸರಕ್ಕೆ ಹಾನಿಕಾರಕವಾಗಿರುವ ಪಿಒಪಿ ಗಣೇಶ (POP Ganesh) ಮೂರ್ತಿಗಳನ್ನ ತಯಾರು ಮಾಡುತ್ತಿದ್ದಾರೆ.

ಆದರೆ, ಇಲ್ಲೊಂದು ಕುಟುಂಬ ಮಾತ್ರ ಶತಮಾತ ಮಾನಗಳಿಂದಲೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮಾಡಿಕೊಂಡು ಬಂದಿದೆ.

Join Our Telegram: https://t.me/dcgkannada

ಹೌದು, ಗಣೇಶಪುರದ ಭಾರತ ನಗರದ ಸಂತೋಷ ಚಿತ್ರಗಾರ ಕುಟುಂಬ ಶತಮಾನಗಳಿಂದಲೂ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣ ಮಾಡಿಕೊಂಡು ಬಂದಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(POP), ವಿವಿಧ ಬಗೆಯ ಗಣೇಶನ ಮೂರ್ತಿಗಳಿಗೆ ರಾಸಾಯನಿಕ ಬಣ್ಣಗಳನ್ನು ಲೇಪಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕಾರಣ ಇತ್ತೀಚಿನ ವರ್ಷಗಳಲ್ಲಿ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳತ್ತ ಒಲವು ಹೆಚ್ಚಿದೆ.

ಸಂಸ್ಥೆಗಳು, ಯುವಕರ ಸಂಘಗಳು ಸೇರಿ ಹಲವರು ಪರಿಸರ ಸ್ನೇಹಿ ಗಣೇಶ ತಯಾರಿಕರ ಬಳಿ ಬಂದು ಮಣ್ಣಿನ ಮೂರ್ತಿಗಳಿಗೆ ಬೇಡಿಕೆ ಇಡುತ್ತಿದ್ದಾರೆ ಎನ್ನುತ್ತಾರೆ ಗಣೇಶ ಮೂರ್ತಿ ತಯಾರಕ ಸಂತೋಷ ಚಿತ್ರಗಾರ.

ಪೂರ್ವಿಕರಿಂದ ಬಂದ ಕಲೆ:

ಇವರ ಪೂರ್ವಿಕರು ಮಣ್ಣಿನ ಗಣಪತಿ ಮೂರ್ತಿಯನ್ನೇ ಪೂಜಿಸುತ್ತಿದ್ದರು. ತಯಾರಿಸುತ್ತಿದ್ದರು. ಹೀಗಾಗಿ, ಸಂತೋಷ ಚಿತ್ರಗಾರ ಹಾಗೂ ಅವರ ಕುಟುಂಬದವರು ಸೇರಿ ಇದೀಗ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿದ್ದಾರೆ.

ಒಂದು ತಿಂಗಳ ಮುಂಚಿತವಾಗಿ ನಿಮಗೆ ಬೇಕಾದ ರೀತಿಯ ಗಣೇಶ ಮೂರ್ತಿ ಮಾಡಲು ಹೇಳಿದ್ರೆ ಅದೇ ತರಹದ ಗಣೇಶ ಮೂರ್ತಿ ಮಾಡಿಕೊಡುತ್ತಾರೆ.

ನಿವೃತ್ತ ಸೈನಿಕ:

ಸಂತೋಷ ಚಿತ್ರಗಾರ ಅವರು ದೇಶ ಸೇವೆ ಮಾಡಿ,ಇದೀಗ ನಿವೃತ್ತಿ ಹೊಂದಿ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಸೈನ್ಯದಲ್ಲಿ ಇದ್ದಾಗಲೂ ಗಣೇಶ ಮೂರ್ತಿ ಮಾಡಲು ರಜೆ ಹಾಕಿ ಬಂದು ಪರಿಸರ ಸ್ನೇಹಿ ಗಣೇಶ ನಿರ್ಮಾಣ ಮಾಡುತ್ತಿದ್ದರು. ಇವರು ಡ್ರಾಯಿಂಗ್ ಕೋರ್ಸ್ ಹಾಗೂ ಮೂರ್ತಿ ತಯಾರಿಕೆ ಕೋರ್ಸ್ ಮುಗಿಸಿದ್ದಾರೆ. ಹೀಗಾಗಿ ಇವರಿಂದ ಸುಂದರ ಮೂರ್ತಿ ನಿರ್ಮಾಣವಾಗುತ್ತಿವೆ.

ಪಿಒಪಿಯಿಂದ ಜಲಚಲರಕ್ಕೆ ಕಂಟಕ:

ಪಿಒಪಿ ಬಣ್ಣದ ಗಣಪತಿ ಮೂರ್ತಿಗಳನ್ನು ಕೆರೆ, ಬಾವಿಗಳಿಗೆ ಬಿಡುವುದರಿಂದ ಅಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಜಲಚರಗಳು ರಾಸಾಯನಿಕ ಬಣ್ಣದ ನೀರನ್ನು ಕುಡಿಯುವುದರಿಂದ ಪ್ರಾಣ ಕಳೆದುಕೊಳ್ಳುತ್ತವೆ. ಇದಷ್ಟೇ ಅಲ್ಲದೇ ಪಿಒಪಿ ಗಣೇಶ ಮೂರ್ತಿಗಳು ಕರಗದೇ ಹಾಗೇ ಉಳಿದು ನೀರಿ ಸೆಲೆ ನಾಶವಾಗಿತ್ತದೆ. ಹೀಗಾಗಿ ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ.

ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ನಿರ್ಮಾಣ ಮಾಡುತ್ತಿದ್ದೇವೆ. ನಮ್ಮ ಪೂರ್ವಜರು ಮಣ್ಣಿನ ಗಣೇಶ ತಯಾರಿ ಮಾಡುತ್ತಿದ್ದರು. ಇತ್ತೀಚಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಿದೆ. ಪರಿಸರ ಸ್ನೇಹಿ ಗಣೇಶ ತಯಾರಿ ತೃಪ್ತಿ ನೀಡಿದೆ ಎನ್ನುತ್ತಾರೆ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರ ಚಿತ್ರಕಾರ ಸಂತೋಷ.

ಇದನ್ನೂ ಓದಿ: ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ