Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ