Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ