Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ