Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ