Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ