Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ. ಸಿಲಿಂಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸಿಲಿಂಡರ್ ಪೂರೈಕೆ,ವಿತರಣೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.ಗ್ರಾಹಕರು ಆತಂಕಗೊAಡು ಏಜೆನ್ಸಿಗಳ ಮುಂದೆ ಸರದಿಯಲ್ಲಿ ನಿಲ್ಲುವುದು ಬೇಡ