Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ:               ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್

ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಕಾಲುವೆಯಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ನಡಹಳ್ಳಿ ಸಹಾಯಧನ

ಮುದ್ದೇಬಿಹಾಳ : ಕಳೆದ ತಿಂಗಳು ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಇರುವ ಕಾಲುವೆಗೆ ಬಟ್ಟೆ

ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ:                                          ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಸದನದಲ್ಲಿ ಶಾಸಕ ಸಿ.ಎಸ್.ನಾಡಗೌಡ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿಕೆಶಿ ಉತ್ತರ: ಮಾರ್ಚ್ ಅಂತ್ಯಕ್ಕೆ ನಾಗರಬೆಟ್ಟ ಏತನೀರಾವರಿ ಯೋಜನೆ ಪೂರ್ಣ

ಮುದ್ದೇಬಿಹಾಳ : ತಾಲ್ಲೂಕಿನ ಮಹತ್ವಾಕಾಂಕ್ಷೆ ನೀರಾವರಿ ಯೋಜನೆಗಳಲ್ಲಿ ಒಂದಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯ

ಶರಣ ಬೆಳಗು ಕಾರ್ಯಕ್ರಮ:                                               ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ವೇದಿಕೆ ನೇತೃತ್ವದಲ್ಲಿ ಲಿಂ.ಪರಮಾನAದ ಮಸ್ಕಿ ಹಾಗೂ ಭುವನೇಶ ಕಟಗೇರಿ ಸ್ಮರಣಾರ್ಥ ಗುರುವಾರ ಏರ್ಪಡಿಸಿದ್ದ ಶರಣ ಬೆಳಗು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಸವಣ್ಣನವರ

ಶಿಕ್ಷಕರ ಭರ್ತಿಗೆ ಒತ್ತಾಯ:                                          ಆರ್.ಎಂ.ಎಸ್.ಎ ಶಾಲೆಯಲ್ಲಿ ಶಿಕ್ಷಕರ ಕೊರತೆ

ಶಿಕ್ಷಕರ ಭರ್ತಿಗೆ ಒತ್ತಾಯ: ಆರ್.ಎಂ.ಎಸ್.ಎ ಶಾಲೆಯಲ್ಲಿ ಶಿಕ್ಷಕರ ಕೊರತೆ

ಮುದ್ದೇಬಿಹಾಳ : ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಯಂ ಶಿಕ್ಷಕರ ಕೊರತೆ ಇದ್ದು ಕೊರತೆ ಇರುವ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದು ಶಾಲಾ ಸುಧಾರಣಾ ಹಾಗೂ ಉಸ್ತುವಾರಿ ಸಮೀತಿ ಸದಸ್ಯರು ಬಿಇಒಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು. ಬಿಇಒ ಕಚೇರಿಗೆ ಆಗಮಿಸಿದ್ದ ಎಸ್.ಡಿ.ಎಂ.ಸಿ ಸದಸ್ಯ ಬಂದೇನವಾಜ ಕುಮಸಿ ಮಾತನಾಡಿ, ಶಾಲೆಯಲ್ಲಿ 509 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅನೇಕ ವರ್ಷಗಳಿಂದ ಎಸ್.ಎಸ್.ಎಲ್.ಸಿ.ಯಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸುತ್ತ ಬಂದಿದೆ ಎಂದು