Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ ನಾಲ್ಕು ಜನ ಹಸಿದವರಿಗೆ ಅನ್ನದಾನ ಮಾಡಿದರೆ ಅವರಿಗೆ ಹೊಟ್ಟೆ ತುಂಬಿಸಿದ ಪುಣ್ಯ ನಮಗೆ ದೊರಕುತ್ತದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ಎಸ್.ರಾಂಪೂರ ಹೇಳಿದರು. ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ತಮ್ಮ ಜನ್ಮದಿನದ ನಿಮಿತ್ಯ ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳು, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೈಗೊಂಡು ಅವರು ಮಾತನಾಡಿರು.ಹಬ್ಬ ಹಾಗೂ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಚಿನ್ಮಯ ಜೆಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ-2026-27 ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು. ಪಟ್ಟಣದ ಚಿನ್ಮಯ ಜೆಸಿ ಶಾಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.4-9 ತರಗತಿ ಮಕ್ಕಳಿಗಾಗಿ ಮಾ.15 ರಂದು ಬೆಳಗ್ಗೆ 11 ರಿಂದ 12.30ರವರೆಗೆ