Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ವಾಹನಗಳು ಪಲ್ಟಿ ಹೊಡೆದ ಪರಿಣಾಮ ಟೆಂಪೋಟ್ರಾವೆಲ್ಸ್ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನುಳಿದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಆಲಮಟ್ಟಿ ರಸ್ತೆಯಲ್ಲಿ ಬರುವ ಮಾದಿನಾಳ ಕ್ರಾಸ್‌ನಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಜಟ್ಟಗಿ ತಾಂಡಾದ ನಿವಾಸಿ ಕಸ್ತೂರಿಬಾಯಿ ಕೃಷ್ಣಪ್ಪ ಲಮಾಣಿ(50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.ಟಿಟಿಯಲ್ಲಿ ಪ್ರಯಾಣಿಸುತ್ತಿದ್ದ ಗೆದ್ದಲಮರಿ ತಾಂಡಾದ ಗುರು ರಾಯಪ್ಪ ಲಮಾಣಿ, ಜಟ್ಟಗಿಯ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು