Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮುದ್ದೇಬಿಹಾಳ : ತಾಲ್ಲೂಕಿನ ಬೈಲಕೂರ ಗ್ರಾಮದ ಬೈಲಾದ್ರೇಶ್ವರ ಜಾತ್ರಾ ಮಹೋತ್ಸವ ಮಾ.19 ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾ.19 ರಂದು ಬೆಳಗ್ಗೆ 8ಕ್ಕೆ ಮ್ಯಾಟ್ ಮೇಲೆ ಕಬಡ್ಡಿ ಪಂದ್ಯಾವಳಿ,ಮದ್ಯಾಹ್ನ 3ಕ್ಕೆ ಗಡಿಗೆ ಒಡೆಯುವ ಸ್ಪರ್ಧೆ, ರಾತ್ರಿ 9.30ಕ್ಕೆ ಸನ್ಮಾನ ಸಮಾರಂಭ, ರಾತ್ರಿ 10.30ಕ್ಕೆ ಅರುಣೋದಯ ಸಾಂಸ್ಕೃತಿಕ ಜಾನಪದ ನೃತ್ಯ ನಡೆಯಲಿದೆ. ಮಾ.20 ರಂದು ಬೆಳಗ್ಗೆ 10ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ಬೈಲಾದ್ರೇಶ್ವರ ಬೆಳ್ಳಿ ಮೂರ್ತಿ ಹಾಗೂ ಗಂಗಸ್ಥಳಕ್ಕೆ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.