Pramod mutalik: Bigger danger than halal is china stuff

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

Pramod mutalik: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು: ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಳಗಾವಿ: ಹಲಾಲ್ ಕ್ಕಿಂತ ದೊಡ್ಡ ಡೆಂಜರ್ ಚೀನಾ ವಸ್ತುಗಳು, ಅವುಗಳನ್ನು ಜನರು ಬ್ಯಾನ್ ಮಾಡಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಸೋಮವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಲಾಲ್ ಮುಕ್ತ ಗಣೇಶೋತ್ಸವ ಆಚರಣೆ ಮಾಡುವಂತೆ ಜಾಗೃತಿ ಮೂಡಿಸುತ್ತಿದ್ದೇವೆ. ಗಣೇಶ ಹಬ್ಬದಲ್ಲಿ ಹಲಾಲ್ ಸಂಬಂಧಿಸಿದ ಹೂವು, ಹಣ್ಣು, ಕಾಯಿ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಲಾಲ್ ಕಟ್ ಮಾಡುವವರ ಕಡೆಯಿಂದ ಖರೀದಿಸಬಾರದು ಎಂದರು.

ಗೋ ಹಂತಕರು, ಗೋ ಭಕ್ಷಕರಿಂದಲೂ ಮಾರಾಟ ಮಾಡುವ ವಸ್ತು ಅಪವಿತ್ರವಾಗಿರುತ್ತದೆ. ದೇವಸ್ಥಾನದ ಸುತ್ತಮುತ್ತಲಿನ ಕಡೆ ಮುಸ್ಲಿಮರು ವ್ಯಾಪಾರ ನಡೆಸಿ ದೇವಸ್ಥಾನವನ್ನು ಧ್ವಂಸ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಹೈದರಾಬಾದ್ ನಲ್ಲಿ 16 ದೇವಸ್ಥಾನದಗಳನ್ನು ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಇಲ್ಲಿಯವರೆಗೂ ಹಿಂದುಗಳ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಿಲ್ಲ. 40 ಹಿಂದು ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದು ಶಾಲಾ, ಕಾಲೇಜಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಹಿಂದು ಸಮಾಜವನ್ನು ಕೆಣಕುತ್ತಿರುವ ಪುಟಗೋಸಿ ಬಾಂಗ್ಲಾದೇಶ ಗೆ ತಕ್ಕ ಉತ್ತರ ಕೊಡಬೇಕಿದ್ದ ಕೇಂದ್ರ ಸರಕಾರ ಯಾಕೆ ಬಾಂಗ್ಲಾದೇಶದ ಹಿಂದುಗಳಿಗೆ ರಕ್ಷಣೆ ಕೊಡುತ್ತಿಲ್ಲ. ಯಾಕೆ ಪ್ರಧಾನಿ ನರೇಂದ್ರ ‌ಮೋದಿ ಮೌನವಹಿಸಿದ್ದಾರೆ ಏಕೆ ಎಂದು ಪ್ರಶ್ನಿಸಿದರು.

ಬಾಂಗ್ಲಾದೇಶದ ಪ್ರಧಾನಿ ಫಸೀನಾಗೆ ರಕ್ಷಣೆ ಕೊಡುವ ಕೇಂದ್ರ ಸರಕಾರ ಬಾಂಗ್ಲಾದೇಶದ ಹಿಂದುಗಳ ರಕ್ಷಣೆ ‌ಮಾಡುತ್ತಿಲ್ಲ. ಇಂದಿರಾಗಾಂಧಿಯವರು 1971ರಲ್ಲಿ ನಡೆಸಿದ ಯುದ್ಧದ ಮಾದರಿಯಲ್ಲಿ ಬಾಂಗ್ಲಾದೇಶದ ಮೇಲೆ ಕೇಂದ್ರ ಸರಕಾರ ನಡೆಸಬೇಕು. ಕೇಂದ್ರ ಸರಕಾರದ ಮಾಹಿತಿ ಪ್ರಕಾರ 5 ಕೋಟಿ ಬಾಂಗ್ಲಾ ನುಸುಳುಕೋರರು ಇದ್ದಾರೆ. ಕರ್ನಾಟಕದಲ್ಲಿ 12 ಲಕ್ಷ ಜನರು ಬಾಂಗ್ಲಾದೇಶದ ನುಸುಳಿಕೋರರು ಇದ್ದಾರೆ ಅವರನ್ನು ಒದ್ದು ಹೋರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ದೇಶದ್ರೋಹಿ ಕ್ಯಾನ್ಸರ್ ಇದ್ದ ಹಾಗೆ. ಇವರನ್ನು ಈಗಲೇ ಹೊಸುಕಿ ಹಾಕಿ ಎಂದರು.

ಮಹಾರಾಷ್ಟ್ರದ ಜಳಗಾವದಲ್ಲಿ ರಾಮಗೀರಿ ಮಹಾರಾಜರು ತಮ್ಮ ಪ್ರವಚನದಲ್ಲಿ‌ ಮೊಹಮ್ಮದ್ ಪೈಗಂಬರ್ ಬಗ್ಗೆ ಪ್ರಸ್ತಾಪಿಸಿದರು. ಆದರೆ ಅವರ ವಿರುದ್ದ ಸರತನ್ ಸೇ ಜುದಾ ಅಂತಾರೆ. ಇದೇನು ಪಾಕಿಸ್ತಾನವಾ ಎಂದು ಪ್ರಶ್ನಿಸಿದ ಅವರು, ರಾಮಗೀರಿ ಮಹಾರಾಜರ ಪರವಾಗಿ ಶ್ರೀರಾಮ ಸೇನೆ ನಿಲ್ಲುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿರುವುದನ್ನು ಹಿಂಪಡೆಯಬೇಕಿತ್ತು. ಆದರೆ ಇವರಿಗೆ ಚುನಾವಣೆಯಲ್ಲಿ ಮಾತ್ರ ಹಿಂದುಗಳು ನೆನಪಾಗುತ್ತಾರೆ‌. ಬಿಜೆಪಿ ಹುಟ್ಟಿದ್ದೇ ಜನಸಂಗ ಹಿಂದು ಸಂಘಟನೆಯಿಂದ ಇದನ್ನು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

ಇದನ್ನೂ ಓದಿ: Gruhalakshmi reels: ಗೃಹಲಕ್ಷ್ಮಿ ತಂದ ಬದಲಾವಣೆ.. ರೀಲ್ಸ್ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ.. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ (ವಿಡಿಯೋ ನೋಡಿ)

ಶ್ರೀರಾಮ ಸೇನಾ ಮುಖಂಡರಾದ ರವಿ ಕೋಕಿತ್ಕರ್, ವಿನಯ ಅಂಗ್ರೋಳಿ, ವಿಠ್ಠಲ ಗಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ