Pratibha Kananji-Dharikar, a platform for the unveiling of talent

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಪ್ರತಿಭೆಯ ಅನಾವರಣದ ವೇದಿಕೆ ಪ್ರತಿಭಾ ಕಾರಂಜಿ-ಧರಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಅವರಲ್ಲಿ ಹುದುಗಿರುವ ಕಲೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಪೂರಕವಾದ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ತಾಲ್ಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಂಗಡಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ,ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಇಂತಹ ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ. ಸರ್ಕಾರ ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಬಿ.ಎಚ್.ಮುದ್ನೂರ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಸಿ.ಆರ್.ಸಿ ಎಂ.ಡಿ.ಅಮರವಾಡಗಿ ಮಾತನಾಡಿದರು.

ಗ್ರಾಪಂ ಸದಸ್ಯ ರಮೇಶ ಇಂಗಳಗಿ, ಅಭ್ಯುದಯ ಶಾಲೆಯ ಮುಖ್ಯಗುರು ಆರ್.ಎಂ.ಹರನಾಳ, ಸಂಗಮೇಶ ಹೂಗಾರ, ರವಿ ಗೌಡರ ಸೇರಿದಂತೆ ತಂಗಡಗಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಪ್ಯಾಲಿಸ್ಟೈನ್ ಧ್ವಜ ಹಾರಾಟ, ಪ್ರಕರಣ ದಾಖಲು: ಎಸ್ಪಿ ಅಮರನಾಥ ರೆಡ್ಡಿ (ವಿಡಿಯೋ ನೋಡಿ)

ಜಿ.ಎಸ್.ಗುರುವಿನ ಸ್ವಾಗತಿಸಿದರು. ವಿಜಯಲಕ್ಷ್ಮಿ ಮಳಗಾವಿ ನಿರೂಪಿಸಿದರು. ಬಸವರಾಜ ಅಥಣಿ ವಂದಿಸಿದರು.

Latest News

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ