Press Day on June 26: Awards for best journalists

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಮುದ್ದೇಬಿಹಾಳ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.26 ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದ್ದು ನಗರ,ಗ್ರಾಮೀಣ ಭಾಗದ ಐವರು ಪತ್ರಕರ್ತರಿಗೆ ಹಾಗೂ ಒಬ್ಬರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತು ವಡವಡಗಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಕಾನಿಪ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಜು.26ರಂದು ಬೆಳಿಗ್ಗೆ 9 ಗಂಟೆಗೆ ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಚಾರಿಟೇಬಲ್ ಟ್ರಸ್ಟ್ನ ಕಾಲೇಜು ಆವರಣದಲ್ಲಿ ಸಮಾರಂಭ ಹಮ್ಮಿಕೊಳ್ಳಲು, ಪಿಯುಸಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮದ ಮೌಲ್ಯ, ಪತ್ರಕರ್ತರ ಕರ್ತವ್ಯ ಸೇರಿ ಹಲವು ವಿಷಯಗಳನ್ನು ತಿಳಿಸಿಕೊಡಲು ವಿಶೇಷ ಉಪನ್ಯಾಸ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ ಮಾತನಾಡಿ, ಕೆಯುಡಬ್ಲುಜೆ ವಿಜಯಪುರ ಜಿಲ್ಲಾ ಘಟಕಕ್ಕೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವನ ಬಾಗೇವಾಡಿಯ ಹಿರಿಯ ಪತ್ರಕರ್ತ ಪ್ರಕಾಶ ಬೆಣ್ಣೂರ ಅವರನ್ನು ಸನ್ಮಾನಿಸಲು ತೀರ್ಮಾನಿಸಿರುವ ಹಾಗೂ ಸರ್ವ ಸದಸ್ಯರು ಸ್ವ ಇಚ್ಚೆಯಿಂದ ಸಮಾರಂಭದ ಜವಾಬ್ಧಾರಿ ವಹಿಸಿಕೊಂಡು ಯಾರಿಂದಲೂ ಚಂದಾ ಎತ್ತದೆ ಸಮಾರಂಭವನ್ನು ಮಾದರಿಯಾಗಿಸಲು ಮುಂದೆ ಬಂದಿರುವುದು ಶ್ಲಾಘನೀಯ ಎಂದರು.

ಸಂಘದ ತಾಲೂಕು ಉಪಾಧ್ಯಕ್ಷ ಸಿದ್ದು ಚಲವಾದಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನವರ್, ಸಂಘದ ಮಾಜಿ ಅಧ್ಯಕ್ಷರಾದ ಎಚ್.ಆರ್.ಬಾಗವಾನ, ಅಮೀನಸಾಬ ಮುಲ್ಲಾ, ಸದಸ್ಯರಾದ ನೂರೇನಬಿ ನದಾಫ, ಬಂದೇನವಾಜ್ ಕುಮಸಿ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಪುಂಡಲೀಕ ಮುರಾಳ, ಮಕ್ಬುಲ್ ಬನ್ನೆಟ್ಟಿ, ಹಣಮಂತ ಬೀರಗೊಂಡ(ಢವಳಗಿ), ಮುತ್ತು ಬೀರಗೊಂಡ (ಢವಳಗಿ), ಗುರುರಾಜ ಪತ್ತಾರ(ಬಡಿಗೇರ), ಕೃಷ್ಣಾ ಕುಂಬಾರ, ಸೂರಜ್ ರಿಸಾಲ್ದಾರ್, ಈಶ್ವರ ಈಳಗೇರ(ರೂಢಗಿ), ನಾಗೇಂದ್ರ ಶಿವಸಿಂಪಿ ಇದ್ದರು.

ಆಯ್ಕೆಯಾದ ಪತ್ರಕರ್ತರು:
ಮುದ್ದೇಬಿಹಾಳ ತಾಲೂಕು ಮಟ್ಟದ ಉತ್ತಮ ಪತ್ರಕರ್ತ ವಾರ್ಷಿಕ ಪ್ರಶಸ್ತಿಗೆ ಯುವ ಪತ್ರಕರ್ತರಾದ ಹಣಮಂತ ಬೀರಗೊಂಡ (ಢವಳಗಿ), ರಿಯಾಜ್ ಮುಲ್ಲಾ, ಮುತ್ತು ಟಕ್ಕಳಕಿ, ಈಶ್ವರ ಈಳಗೇರ (ರೂಢಗಿ) ಮತ್ತು ಕೃಷ್ಣಾ ಕುಂಬಾರ ಹಾಗೂ ಸಂಘದ ಹಿರಿಯ ಸದಸ್ಯ ನೂರೇನಬಿ ನದಾಫ ಅವರನ್ನು ಚೀಟಿ ಎತ್ತುವ ಮೂಲಕ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್