Press Day on June 26: Awards for best journalists

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಮುದ್ದೇಬಿಹಾಳ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.26 ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದ್ದು ನಗರ,ಗ್ರಾಮೀಣ ಭಾಗದ ಐವರು ಪತ್ರಕರ್ತರಿಗೆ ಹಾಗೂ ಒಬ್ಬರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತು ವಡವಡಗಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಕಾನಿಪ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಜು.26ರಂದು ಬೆಳಿಗ್ಗೆ 9 ಗಂಟೆಗೆ ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಚಾರಿಟೇಬಲ್ ಟ್ರಸ್ಟ್ನ ಕಾಲೇಜು ಆವರಣದಲ್ಲಿ ಸಮಾರಂಭ ಹಮ್ಮಿಕೊಳ್ಳಲು, ಪಿಯುಸಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮದ ಮೌಲ್ಯ, ಪತ್ರಕರ್ತರ ಕರ್ತವ್ಯ ಸೇರಿ ಹಲವು ವಿಷಯಗಳನ್ನು ತಿಳಿಸಿಕೊಡಲು ವಿಶೇಷ ಉಪನ್ಯಾಸ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ ಮಾತನಾಡಿ, ಕೆಯುಡಬ್ಲುಜೆ ವಿಜಯಪುರ ಜಿಲ್ಲಾ ಘಟಕಕ್ಕೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವನ ಬಾಗೇವಾಡಿಯ ಹಿರಿಯ ಪತ್ರಕರ್ತ ಪ್ರಕಾಶ ಬೆಣ್ಣೂರ ಅವರನ್ನು ಸನ್ಮಾನಿಸಲು ತೀರ್ಮಾನಿಸಿರುವ ಹಾಗೂ ಸರ್ವ ಸದಸ್ಯರು ಸ್ವ ಇಚ್ಚೆಯಿಂದ ಸಮಾರಂಭದ ಜವಾಬ್ಧಾರಿ ವಹಿಸಿಕೊಂಡು ಯಾರಿಂದಲೂ ಚಂದಾ ಎತ್ತದೆ ಸಮಾರಂಭವನ್ನು ಮಾದರಿಯಾಗಿಸಲು ಮುಂದೆ ಬಂದಿರುವುದು ಶ್ಲಾಘನೀಯ ಎಂದರು.

ಸಂಘದ ತಾಲೂಕು ಉಪಾಧ್ಯಕ್ಷ ಸಿದ್ದು ಚಲವಾದಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನವರ್, ಸಂಘದ ಮಾಜಿ ಅಧ್ಯಕ್ಷರಾದ ಎಚ್.ಆರ್.ಬಾಗವಾನ, ಅಮೀನಸಾಬ ಮುಲ್ಲಾ, ಸದಸ್ಯರಾದ ನೂರೇನಬಿ ನದಾಫ, ಬಂದೇನವಾಜ್ ಕುಮಸಿ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಪುಂಡಲೀಕ ಮುರಾಳ, ಮಕ್ಬುಲ್ ಬನ್ನೆಟ್ಟಿ, ಹಣಮಂತ ಬೀರಗೊಂಡ(ಢವಳಗಿ), ಮುತ್ತು ಬೀರಗೊಂಡ (ಢವಳಗಿ), ಗುರುರಾಜ ಪತ್ತಾರ(ಬಡಿಗೇರ), ಕೃಷ್ಣಾ ಕುಂಬಾರ, ಸೂರಜ್ ರಿಸಾಲ್ದಾರ್, ಈಶ್ವರ ಈಳಗೇರ(ರೂಢಗಿ), ನಾಗೇಂದ್ರ ಶಿವಸಿಂಪಿ ಇದ್ದರು.

ಆಯ್ಕೆಯಾದ ಪತ್ರಕರ್ತರು:
ಮುದ್ದೇಬಿಹಾಳ ತಾಲೂಕು ಮಟ್ಟದ ಉತ್ತಮ ಪತ್ರಕರ್ತ ವಾರ್ಷಿಕ ಪ್ರಶಸ್ತಿಗೆ ಯುವ ಪತ್ರಕರ್ತರಾದ ಹಣಮಂತ ಬೀರಗೊಂಡ (ಢವಳಗಿ), ರಿಯಾಜ್ ಮುಲ್ಲಾ, ಮುತ್ತು ಟಕ್ಕಳಕಿ, ಈಶ್ವರ ಈಳಗೇರ (ರೂಢಗಿ) ಮತ್ತು ಕೃಷ್ಣಾ ಕುಂಬಾರ ಹಾಗೂ ಸಂಘದ ಹಿರಿಯ ಸದಸ್ಯ ನೂರೇನಬಿ ನದಾಫ ಅವರನ್ನು ಚೀಟಿ ಎತ್ತುವ ಮೂಲಕ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ