Press Day on June 26: Awards for best journalists

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಜು.26 ರಂದು ಪತ್ರಿಕಾ ದಿನಾಚರಣೆ: ಉತ್ತಮ ಪತ್ರಕರ್ತರಿಗೆ ಪ್ರಶಸ್ತಿಗೆ

ಮುದ್ದೇಬಿಹಾಳ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.26 ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದ್ದು ನಗರ,ಗ್ರಾಮೀಣ ಭಾಗದ ಐವರು ಪತ್ರಕರ್ತರಿಗೆ ಹಾಗೂ ಒಬ್ಬರನ್ನು ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತು ವಡವಡಗಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಕಾನಿಪ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಜು.26ರಂದು ಬೆಳಿಗ್ಗೆ 9 ಗಂಟೆಗೆ ಆಲಮಟ್ಟಿ ರಸ್ತೆ ಪಕ್ಕದ ಅರಿಹಂತಗಿರಿಯಲ್ಲಿರುವ ಅರಿಹಂತ ಚಾರಿಟೇಬಲ್ ಟ್ರಸ್ಟ್ನ ಕಾಲೇಜು ಆವರಣದಲ್ಲಿ ಸಮಾರಂಭ ಹಮ್ಮಿಕೊಳ್ಳಲು, ಪಿಯುಸಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪತ್ರಿಕೋದ್ಯಮದ ಮೌಲ್ಯ, ಪತ್ರಕರ್ತರ ಕರ್ತವ್ಯ ಸೇರಿ ಹಲವು ವಿಷಯಗಳನ್ನು ತಿಳಿಸಿಕೊಡಲು ವಿಶೇಷ ಉಪನ್ಯಾಸ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ ಮಾತನಾಡಿ, ಕೆಯುಡಬ್ಲುಜೆ ವಿಜಯಪುರ ಜಿಲ್ಲಾ ಘಟಕಕ್ಕೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವನ ಬಾಗೇವಾಡಿಯ ಹಿರಿಯ ಪತ್ರಕರ್ತ ಪ್ರಕಾಶ ಬೆಣ್ಣೂರ ಅವರನ್ನು ಸನ್ಮಾನಿಸಲು ತೀರ್ಮಾನಿಸಿರುವ ಹಾಗೂ ಸರ್ವ ಸದಸ್ಯರು ಸ್ವ ಇಚ್ಚೆಯಿಂದ ಸಮಾರಂಭದ ಜವಾಬ್ಧಾರಿ ವಹಿಸಿಕೊಂಡು ಯಾರಿಂದಲೂ ಚಂದಾ ಎತ್ತದೆ ಸಮಾರಂಭವನ್ನು ಮಾದರಿಯಾಗಿಸಲು ಮುಂದೆ ಬಂದಿರುವುದು ಶ್ಲಾಘನೀಯ ಎಂದರು.

ಸಂಘದ ತಾಲೂಕು ಉಪಾಧ್ಯಕ್ಷ ಸಿದ್ದು ಚಲವಾದಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನವರ್, ಸಂಘದ ಮಾಜಿ ಅಧ್ಯಕ್ಷರಾದ ಎಚ್.ಆರ್.ಬಾಗವಾನ, ಅಮೀನಸಾಬ ಮುಲ್ಲಾ, ಸದಸ್ಯರಾದ ನೂರೇನಬಿ ನದಾಫ, ಬಂದೇನವಾಜ್ ಕುಮಸಿ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಪುಂಡಲೀಕ ಮುರಾಳ, ಮಕ್ಬುಲ್ ಬನ್ನೆಟ್ಟಿ, ಹಣಮಂತ ಬೀರಗೊಂಡ(ಢವಳಗಿ), ಮುತ್ತು ಬೀರಗೊಂಡ (ಢವಳಗಿ), ಗುರುರಾಜ ಪತ್ತಾರ(ಬಡಿಗೇರ), ಕೃಷ್ಣಾ ಕುಂಬಾರ, ಸೂರಜ್ ರಿಸಾಲ್ದಾರ್, ಈಶ್ವರ ಈಳಗೇರ(ರೂಢಗಿ), ನಾಗೇಂದ್ರ ಶಿವಸಿಂಪಿ ಇದ್ದರು.

ಆಯ್ಕೆಯಾದ ಪತ್ರಕರ್ತರು:
ಮುದ್ದೇಬಿಹಾಳ ತಾಲೂಕು ಮಟ್ಟದ ಉತ್ತಮ ಪತ್ರಕರ್ತ ವಾರ್ಷಿಕ ಪ್ರಶಸ್ತಿಗೆ ಯುವ ಪತ್ರಕರ್ತರಾದ ಹಣಮಂತ ಬೀರಗೊಂಡ (ಢವಳಗಿ), ರಿಯಾಜ್ ಮುಲ್ಲಾ, ಮುತ್ತು ಟಕ್ಕಳಕಿ, ಈಶ್ವರ ಈಳಗೇರ (ರೂಢಗಿ) ಮತ್ತು ಕೃಷ್ಣಾ ಕುಂಬಾರ ಹಾಗೂ ಸಂಘದ ಹಿರಿಯ ಸದಸ್ಯ ನೂರೇನಬಿ ನದಾಫ ಅವರನ್ನು ಚೀಟಿ ಎತ್ತುವ ಮೂಲಕ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು