ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೇತೃತ್ವ ಹಾಗೂ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನವರ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ನಿಮಿತ್ಯ ಜು.28 ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಾ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹಾಗೂ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಚೇಗೆ ಕಾನಿಪ ಧ್ವನಿ ಸಂಘಟನೆ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಕಾರ್ಯಕ್ರಮಗಳ ವಿವರ ನೀಡಿದರು.

ಅಂದು ಬೆಳಗ್ಗೆ 9 ಗಂಟೆಗೆ ಡಾ.ಪದಕಿ ದವಾಖಾನೆ ಹಿಂದೆ ಇರುವ ಶ್ರೀ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗೆ ಇಸಿಜಿ, ಆರ್.ಬಿ.ಎಸ್ ಉಚಿತ ತಪಾಸಣೆ ಶಿಬಿರ ನಡೆಯಲಿದೆ.

ಬೆಳಗ್ಗೆ 10.30ಕ್ಕೆ ಪಟ್ಟಣದ ಅಂಬೇಡ್ಕರ್ ಸಭಾಭವನದ ಪಕ್ಕದಲ್ಲಿರುವ ಸರಕಾರಿ ಪಿಯು ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ನಿಮಿತ್ಯ ಸಾಧಕರಿಗೆ ಸನ್ಮಾನ,ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಾಧ್ಯಮವಾರು ಮೂರು ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ವಿವಿಧ ಸಮಾಜದ ರುದ್ರಭೂಮಿಗಳಲ್ಲಿ ಸೇವೆ ಮಾಡುವ ಸೇವಾಕರ್ತರಿಗೆ ಸನ್ಮಾನ ಸಮಾರಂಭ ನಡೆಯಲಿದ್ದು ಹಾಲಿ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹಾಗೂ ಮಾಜಿ ಶಾಸಕರಾದ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಕಾರ್ಯಕ್ರಮಕ್ಕೆ ಶುಭ ಕೋರಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಹಾಗೂ ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ವಹಿಸುವರು.

ವಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು.ಕಾ.ನಿ.ಪ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾನಿಪ ಧ್ವನಿ ಜಿಲ್ಲಾ ಘಟಕದ ಅಧ್ಯಕ್ಷ ಮಹ್ಮದಯೂಸೂಫ್ ನೇವಾರ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ್ ನಡಹಳ್ಳಿ,ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ತಹಸೀಲ್ದಾರ್ ಬಲರಾಮ ಕಟ್ಟಿಮನಿ,ತಾಪಂ ಪ್ರಭಾರಿ ಇಒ ಆರ್.ಎಸ್.ಹಿರೇಗೌಡ್ರ, ಪಿ.ಎಸ್.ಐ ಸಂಜಯ ತಿಪರೆಡ್ಡಿ,ಗೃಹರಕ್ಷಕ ದಳದ ಘಟಕಾಧಿಕಾರಿ ಉಮೇಶ ಕಡಿ,ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಸಮಾಜ ಸೇವಕಿ ಸಂಗೀತಾ ನಾಡಗೌಡ್ರ,ಕದಳಿ ವೇದಿಕೆ ತಾಲ್ಲೂಕು ಅಧ್ಯಕ್ಷೆ ಕಾಶೀಬಾಯಿ ರಾಂಪೂರ,ಕಾನಿಪ ಧ್ವನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ,ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ ಆಗಮಿಸುವರು ಎಂದು ತಿಳಿಸಿದರು.

ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಮಾರುತಿ ಹಿಪ್ಪರಗಿ ಮಾತನಾಡಿ,ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಿಭಾಗೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ವಾಣಿಜ್ಯ ತೆರಿಗೆ ಇಲಾಖೆ ಪರಿವೀಕ್ಷಕರಾದ ಬುರಾನಸಾಬ ರುದ್ರವಾಡಿ,ಹಾಜಿಸಾಬ ರುದ್ರವಾಡಿ, ಟಿ5 ನಿರೂಪಕ ಸಂತೋಷ ರಾಠೋಡ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ,ಜಿಲ್ಲಾ ಕಾರ್ಯದರ್ಶಿ ರವಿ ಹಡಪದ(ತೇಲಂಗಿ), ಕಾರ್ಯಕಾರಿ ಸಮಿತಿ ಸದಸ್ಯ ರವಿ ದಂಡಿನ, ಖಜಾಂಚಿ ಹನಮಂತ ನಲವಡೆ,ಸದಸ್ಯರಾದ ಅನಿಲ್ ಹಡಪದ(ತೇಲಂಗಿ), ಅಡಿವೆಪ್ಪ ಕನ್ನೂರ, ಬಸವರಾಜ ಕುಂಟೋಜಿ, ಬಸಲಿಂಗಪ್ಪ ಹೂಗಾರ, ವಿನಯಕುಮಾರ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು.

Latest News

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಈ ಯುದ್ಧ ನಡೆಯಬೇಕಾದ ಅವಶ್ಯಕತೆ ಇರಲಿಲ್ಲ.ಯುದ್ಧ ಕೊನೆಗೊಂಡು ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಪ್ರಾರ್ಥನೆ ಮಾಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಉರ್ದು ಶಾಲೆ ಆವರಣದಲ್ಲಿ ಶುಕ್ರವಾರ ದೇವಿಕಾ ಸುಬ್ಬರಾವ್ ಫೌಂಡೇಶನ್‌ದಿAದ ರಂಜಾನ್ ಹಬ್ಬದ ನಿಮಿತ್ಯ ಆಯೋಜನೆ ಮಾಡಿದ್ದ ಇಫ್ತಿಯಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದು ಮಾನವೀಯ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ ಮಾ.9 ರಂದು ಸಾಯಂಕಾಲ 5ಗಂಟೆಗೆ ಪಟ್ಟಣದ ಮಹಾಂತೇಶ ನಗರದ ಗಣೇಶ ಗುಡಿ ಹತ್ತಿರದಲ್ಲಿರುವ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಶಾಲೆಯ ಗೌರವಾಧ್ಯಕ್ಷ ವೇ.ಸಂಗಯ್ಯ ಹಾಲಗಂಗಾಧರಮಠ ವಹಿಸುವರು.ವೈದ್ಯರಾದ ಡಾ.ಚಂದ್ರಶೇಖರ ಶಿವಯೋಗಿಮಠ ಅಧ್ಯಕ್ಷತೆ ವಹಿಸುವರು.ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ಧಮ್ಮೂರಮಠ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಹುಲ್ಲೂರ ಎಸ್.ಎನ್.ಡಿ ನ್ಯಾಶನಲ್