ಜಲಾನಯನ ಮಹೋತ್ಸವ-2025 : ಕುಂಟೋಜಿ,ಕವಡಿಮಟ್ಟಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ನೀರಾವರಿಗೆ ಆದ್ಯತೆ

ಜಲಾನಯನ ಮಹೋತ್ಸವ-2025 : ಕುಂಟೋಜಿ,ಕವಡಿಮಟ್ಟಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ನೀರಾವರಿಗೆ ಆದ್ಯತೆ

ಮುದ್ದೇಬಿಹಾಳ : ಜಲಾನಯನ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಲಾಗುವ ಕೃಷಿ ಹೊಂಡ,ಜಿನುಗು ಕೆರೆ,ನಾಲಾ ಬದು,ತಡೆ ಅಣೆಗಳಿಂದ ತಾಲ್ಲೂಕಿನ ಕವಡಿಮಟ್ಟಿ ಹಾಗೂ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ಜಮೀನು ಅಭಿವೃದ್ಧಿಗೆ ಆದ್ಯತೆ ದೊರೆಯಲಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಲಾನಯನ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿಯಲ್ಲಿ ಸಂಪ್ರದಾಯ ಪದ್ಧತಿಗಿಂತ ಆಧುನಿಕ ಕೃಷಿ ಜ್ಞಾನ ಬಳಸಿಕೊಳ್ಳಬೇಕು.ವಿಶೇಷವಾಗಿ ಕುರಿ ಸಾಕಾಣಿಕೆಗೆ ಸರ್ಕಾರದ ಸಹಾಯಧನ ಪಡೆದುಕೊಂಡು ಲಾಭ ಮಾಡಿಕೊಳ್ಳಬಹುದಾಗಿದೆ.ಒಕ್ಕಲುತನದಂತಹ ಪವಿತ್ರ ವೃತ್ತಿ ಮತ್ತೊಂದಿಲ್ಲ ಎಂದು ಹೇಳಿದರು.

ಕೃಷಿಕರನ್ನು ವಂಚಿಸುವ ದೊಡ್ಡ ಹುನ್ನಾರ ನಡೆದಿದೆ.ಮೆಕ್ಕೆಜೋಳ,ತೊಗರಿ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಆದೇಶಿಸಬೇಕಿರುವುದು ಕೇಂದ್ರ ಸರ್ಕಾರ.ರಾಜ್ಯ ಸರ್ಕಾರ ತನ್ನ ಪಾಲನ್ನು ಕೊಡಲು ಸಿದ್ಧವಿದ್ದರೂ ಕೇಂದ್ರ ಸರ್ಕಾರ ನಿರ್ದೇಶನ ನೀಡುವವರೆಗೂ ರಾಜ್ಯ ಸರ್ಕಾರ ಖರೀದಿ ಆರಂಭಿಸಲು ಸಾಧ್ಯವಿಲ್ಲ.ದೊಡ್ಡ ಮಟ್ಟದಲ್ಲಿ ಆಹಾರ ಧಾನ್ಯ ಖರೀದಿಸಿದಾಗ ಅದನ್ನು ಶೇಖರಿಸುವುದು,ಮರು ಬಳಕೆಗೆ ಕ್ರಮ ಕೈಗೊಳ್ಳುವುದು ಮಾಡುತ್ತದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಂದಾಣಿಕೆಯಿAದ ಸಾಗಿದರೆ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಉಪನ್ಯಾಸ ನೀಡಿದ ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಎ.ಎಮ್.ಸಾವಳಗಿ ಮಾತನಾಡಿ, ನೀರಾವರಿ ಪದ್ಧತಿಯಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ರೈತರಿಗೆ ಅರಿವು ಮೂಡಿಸುವ ಕೆಲಸ ಕೃಷಿ ಇಲಾಖೆ ಮಾಡುತ್ತಿದೆ.ಸಮುದಾಯಗಳು ಜವಾಬ್ದಾರಿ ಅರಿತುಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದರು.
ಬಿಇಒ ಬಿ.ಎಸ್.ಸಾವಳಗಿ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಶಕುಂತಲಾ ಹಂಡರಗಲ್ ಅಧ್ಯಕ್ಷತೆ ವಹಿಸಿದ್ದರು.ಉಪ ಕೃಷಿ ನಿರ್ದೇಶಕ-1 ಶರಣಗೌಡ ಆರ್., ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಟಿ.ಹಿರೇಮಠ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಪಾಟೀಲ , ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಅರವಿಂದ ಹೂಗಾರ,ಸಂಗನಗೌಡ ಪಾಟೀಲ, ಸೋಮನಗೌಡ ಬಿರಾದಾರ,ರಾಜೇಶ್ವರಿ ನಾಡಗೌಡ ಇದ್ದರು.

ಉತ್ಸವದಲ್ಲಿ ಕಿರು ಪುಸ್ತಕ ಬಿಡುಗಡೆ, ಗ್ರಾಮ್ಸ ಸಂಸ್ಥೆಯಿAದ ಬೀದಿ ನಾಟಕ ಪ್ರದರ್ಶನ,ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹಾಗೂ ಶಾಲೆಗೆ ಪಿಎಂಕೆಎಸ್ ಡಬ್ಲೂö್ಯಡಿಸಿ 2.0 ಸನ್ 2025-26 ಯೋಜನೆಯಡಿ 92 ಬೆಂಚ್‌ಗಳನ್ನು ವಿತರಿಸಲಾಯಿತು.ಅಲ್ಲದೇ ರಂಗೋಲಿ,ಚಿತ್ರಕಲೆ ಹಾಗೂ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ,ಮಣ್ಣು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.ಸಂಗಮೇಶ ಶಿವಣಗಿ ಪ್ರಾರ್ಥನಾ ಗೀತೆ ಹಾಡಿದರು.ಟಿ.ಡಿ.ಲಮಾಣಿ ವೀರೇಶ ಆಂದೋನಿ ನಿರೂಪಿಸಿದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ