ಜಲಾನಯನ ಮಹೋತ್ಸವ-2025 : ಕುಂಟೋಜಿ,ಕವಡಿಮಟ್ಟಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ನೀರಾವರಿಗೆ ಆದ್ಯತೆ

ಜಲಾನಯನ ಮಹೋತ್ಸವ-2025 : ಕುಂಟೋಜಿ,ಕವಡಿಮಟ್ಟಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ನೀರಾವರಿಗೆ ಆದ್ಯತೆ

ಮುದ್ದೇಬಿಹಾಳ : ಜಲಾನಯನ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಲಾಗುವ ಕೃಷಿ ಹೊಂಡ,ಜಿನುಗು ಕೆರೆ,ನಾಲಾ ಬದು,ತಡೆ ಅಣೆಗಳಿಂದ ತಾಲ್ಲೂಕಿನ ಕವಡಿಮಟ್ಟಿ ಹಾಗೂ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ಜಮೀನು ಅಭಿವೃದ್ಧಿಗೆ ಆದ್ಯತೆ ದೊರೆಯಲಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಲಾನಯನ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೃಷಿಯಲ್ಲಿ ಸಂಪ್ರದಾಯ ಪದ್ಧತಿಗಿಂತ ಆಧುನಿಕ ಕೃಷಿ ಜ್ಞಾನ ಬಳಸಿಕೊಳ್ಳಬೇಕು.ವಿಶೇಷವಾಗಿ ಕುರಿ ಸಾಕಾಣಿಕೆಗೆ ಸರ್ಕಾರದ ಸಹಾಯಧನ ಪಡೆದುಕೊಂಡು ಲಾಭ ಮಾಡಿಕೊಳ್ಳಬಹುದಾಗಿದೆ.ಒಕ್ಕಲುತನದಂತಹ ಪವಿತ್ರ ವೃತ್ತಿ ಮತ್ತೊಂದಿಲ್ಲ ಎಂದು ಹೇಳಿದರು.

ಕೃಷಿಕರನ್ನು ವಂಚಿಸುವ ದೊಡ್ಡ ಹುನ್ನಾರ ನಡೆದಿದೆ.ಮೆಕ್ಕೆಜೋಳ,ತೊಗರಿ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಆದೇಶಿಸಬೇಕಿರುವುದು ಕೇಂದ್ರ ಸರ್ಕಾರ.ರಾಜ್ಯ ಸರ್ಕಾರ ತನ್ನ ಪಾಲನ್ನು ಕೊಡಲು ಸಿದ್ಧವಿದ್ದರೂ ಕೇಂದ್ರ ಸರ್ಕಾರ ನಿರ್ದೇಶನ ನೀಡುವವರೆಗೂ ರಾಜ್ಯ ಸರ್ಕಾರ ಖರೀದಿ ಆರಂಭಿಸಲು ಸಾಧ್ಯವಿಲ್ಲ.ದೊಡ್ಡ ಮಟ್ಟದಲ್ಲಿ ಆಹಾರ ಧಾನ್ಯ ಖರೀದಿಸಿದಾಗ ಅದನ್ನು ಶೇಖರಿಸುವುದು,ಮರು ಬಳಕೆಗೆ ಕ್ರಮ ಕೈಗೊಳ್ಳುವುದು ಮಾಡುತ್ತದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಂದಾಣಿಕೆಯಿAದ ಸಾಗಿದರೆ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಉಪನ್ಯಾಸ ನೀಡಿದ ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಎ.ಎಮ್.ಸಾವಳಗಿ ಮಾತನಾಡಿ, ನೀರಾವರಿ ಪದ್ಧತಿಯಲ್ಲಿ ಅನುಸರಿಸಬೇಕಾದ ಕ್ರಮಗಳನ್ನು ರೈತರಿಗೆ ಅರಿವು ಮೂಡಿಸುವ ಕೆಲಸ ಕೃಷಿ ಇಲಾಖೆ ಮಾಡುತ್ತಿದೆ.ಸಮುದಾಯಗಳು ಜವಾಬ್ದಾರಿ ಅರಿತುಕೊಂಡು ಅಭಿವೃದ್ಧಿ ಸಾಧಿಸಬೇಕು ಎಂದರು.
ಬಿಇಒ ಬಿ.ಎಸ್.ಸಾವಳಗಿ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಶಕುಂತಲಾ ಹಂಡರಗಲ್ ಅಧ್ಯಕ್ಷತೆ ವಹಿಸಿದ್ದರು.ಉಪ ಕೃಷಿ ನಿರ್ದೇಶಕ-1 ಶರಣಗೌಡ ಆರ್., ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಟಿ.ಹಿರೇಮಠ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಪಾಟೀಲ , ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಅರವಿಂದ ಹೂಗಾರ,ಸಂಗನಗೌಡ ಪಾಟೀಲ, ಸೋಮನಗೌಡ ಬಿರಾದಾರ,ರಾಜೇಶ್ವರಿ ನಾಡಗೌಡ ಇದ್ದರು.

ಉತ್ಸವದಲ್ಲಿ ಕಿರು ಪುಸ್ತಕ ಬಿಡುಗಡೆ, ಗ್ರಾಮ್ಸ ಸಂಸ್ಥೆಯಿAದ ಬೀದಿ ನಾಟಕ ಪ್ರದರ್ಶನ,ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹಾಗೂ ಶಾಲೆಗೆ ಪಿಎಂಕೆಎಸ್ ಡಬ್ಲೂö್ಯಡಿಸಿ 2.0 ಸನ್ 2025-26 ಯೋಜನೆಯಡಿ 92 ಬೆಂಚ್‌ಗಳನ್ನು ವಿತರಿಸಲಾಯಿತು.ಅಲ್ಲದೇ ರಂಗೋಲಿ,ಚಿತ್ರಕಲೆ ಹಾಗೂ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ,ಮಣ್ಣು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.ಸಂಗಮೇಶ ಶಿವಣಗಿ ಪ್ರಾರ್ಥನಾ ಗೀತೆ ಹಾಡಿದರು.ಟಿ.ಡಿ.ಲಮಾಣಿ ವೀರೇಶ ಆಂದೋನಿ ನಿರೂಪಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ