Program as scheduled: Preparations are complete for village deity fair on May 30

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು.

ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ ಆರಂಭಗೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿ ದ್ಯಾಮವ್ವನ ಕಟ್ಟೆಯಲ್ಲಿ ಪ್ರತಿಷ್ಠಾಪನೆ ಆಗಲಿದೆ ಎಂದು ತಿಳಿಸಿದರು.

ಈಗಾಗಲೇ ಮುದ್ದೇಬಿಹಾಳ ಪಟ್ಟಣದ ಎಲ್ಲ ದೇವಸ್ಥಾನ, ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ತಂಗಡಗಿ ರಸ್ತೆಯ ಆರಂಭದಿಂದ ವಿಜಯಪುರ ರಸ್ತೆ,ಆಲಮಟ್ಟಿ ರಸ್ತೆ,ಹುಡ್ಕೋ ರೋಡ್, ಮುಖ್ಯರಸ್ತೆಯಲ್ಲಿ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ,ಹಾಲಿ ನಿರ್ದೇಶಕ ಸತೀಶ ಓಸ್ವಾಲ್, ಶರಣು ಸಜ್ಜನ, ಸುರೇಶಗೌಡ ಪಾಟೀಲ ಇಂಗಳಗೇರಿ ಮಾತನಾಡಿ, ಪೊಲೀಸ್ ಕಾರ್ಟರ್ಸ್ನಲ್ಲಿ ನಿರಂತರ ಐದು ದಿನಗಳ ಕಾಲ ಅನ್ನಪ್ರಸಾದ ವ್ಯವಸ್ಥೆ ಇರಲಿದೆ. ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು ಊಟ ಮಾಡುವವರಿಗೆ ಸಮಸ್ಯೆ ಆಗದಂತೆ ವಾಟರ್‌ಫ್ರೂಫ್ ಪೆಂಡಾಲ್ ಹಾಕಿಸಿದ್ದು ಭಕ್ತಾದಿಗಳು ನಿರಾತಂಕವಾಗಿ ಪ್ರಸಾದ ಮಾಡಬಹುದಾಗಿದೆ ಎಂದರು.

ಭಾರ ಎತ್ತುವ ಸ್ಪರ್ಧೆಯನ್ನು ಕನ್ನಡ ಗಂಡು ಮಕ್ಕಳ ಶಾಲೆಯಿಂದ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಾಡಲಾಗುವುದು ಎಂದು ಕಮೀಟಿ ಮುಖಂಡರು ತಿಳಿಸಿದರು.

ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಮಾತನಾಡಿ, ಮಹಿಳೆಯರು ಕುಂಭಮೇಳದಲ್ಲಿ ಪಾಲ್ಗೊಂಡು ದೇವಿಯ ಮೂರ್ತಿಗಳ ಮೆರವಣಿಗೆ ಯಶಸ್ವಿಗೊಳಿಸಲಾಗುವುದು ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ಎಲ್ಲ ಜಾತಿ, ಧರ್ಮದವರು ಒಗ್ಗೂಡಿ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲು ಸಹಕಾರ ನೀಡಬೇಕು ಎಂದು ಹೇಳಿದರು.

ಸಮೀತಿ ಪ್ರಮುಖರಾದ ಕಾಮರಾಜ ಬಿರಾದಾರ, ವಾಯ್.ಎಚ್.ವಿಜಯಕರ್, ವೆಂಕನಗೌಡ ಪಾಟೀಲ, ಉದಯ ರಾಯಚೂರ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮೊದಲಾದವರು ಮಾತನಾಡಿ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಜಾತ್ರಾ ಕಮೀಟಿ ಪದಾಧಿಕಾರಿಗಳು ಇದ್ದರು.

ಜಾತ್ರೆಯಲ್ಲಿ ರಂಗಭೂಮಿ ಕಲಾವಿದರಿಗೆ, ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಟಿವಿ ಕಲಾವಿದರಿಗಷ್ಟೇ ಮಹತ್ವ ನೀಡಿರುವುದು ರಂಗಭೂಮಿ ಪ್ರೇಮಿಗಳಿಗೆ ನಿರಾಸೆಯುನ್ನುಂಟು ಮಾಡಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾತ್ರಾ ಸಮೀತಿಯ ಮುಖಂಡ ಸತೀಶ ಓಸ್ವಾಲ್, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ,
ಈ ಬಾರಿ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ನಮ್ಮ ಗಮನಕ್ಕಿದೆ. ನಮ್ಮಿಂದ ಈ ವಿಷಯದಲ್ಲಿ ತಪ್ಪಾಗಿದ್ದು ಮುಂದಿನ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ದೇಣಿಗೆ ಸಂಗ್ರಹ, ಸಂಕಷ್ಟ ತೆರೆದಿದ್ದ ಮುಖಂಡ
ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳುವ ಕೆಲವು ಮುಖಂಡರು , ಮುದ್ದೇಬಿಹಾಳದಲ್ಲಿ ಕೋಟಿಗಟ್ಟಲೇ ಆಸ್ತಿ ಮಾಡಿಟ್ಟಿರುವ ಕೆಲವು ಗಣ್ಯರು, ಊರಿನ ಪ್ರಮುಖರು ಎಂದು ಹೇಳಿಕೊಳ್ಳುವವರು ದೇವಿ ಜಾತ್ರೆಯ ದೇಣಿಗೆ ಸಂಗ್ರಹಕ್ಕೆ ಹೋದಾಗ ತಮ್ಮ ಪತ್ನಿಯರನ್ನು ಮುಂದೆ ಕಳಿಸಿ ತಾವು ಊರಲ್ಲಿ ಇಲ್ಲ, ಇಷ್ಟೇ ಬರೆದುಕೊಳ್ಳಿ ಎಂದು ಅಲ್ಪಮೊತ್ತವನ್ನು ಕೊಟ್ಟು ಕಳಿಸಿದ ಉದಾಹರಣೆಗಳು ನಮ್ಮ ಬಳಿ ಇವೆ. ದೊಡ್ಡವರೆನ್ನಿಸಿಕೊಂಡವರು ಕೇವಲ ತೋರಿಕೆಗಾಗಿ ನಮ್ಮದು ಪ್ರತಿಷ್ಠಿತ ಮನೆತನಗಳು ಎಂದು ಹೇಳಿಕೊಂಡು ಪುಕ್ಕಟೆ ಪ್ರಚಾರ ಪಡೆದುಕೊಳ್ಳದೇ ಭಕ್ತಿಯಿಂದ ದೇವಿ ಜಾತ್ರೆಗೆ ದೇಣಿಗೆ ನೀಡಲು ಮುಕ್ತ ಮನಸ್ಸನ್ನು ಹೊಂದಿರುವಂತೆ ಮುಂದಿನ ದಿನಗಳಲ್ಲಿ ದೇವಿ ಅಂತವರಿಗೆ ಸದ್ಭುದ್ದಿ ಕೊಡಲಿ ಎಂದು ಹಣಕಾಸು ಸಮೀತಿಯ ಪ್ರಮುಖ ಸುನೀಲ ಇಲ್ಲೂರ, ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ ದೇಣಿಗೆ ಸಂಗ್ರಹದ ಸಮಯದಲ್ಲಿ ಎದುರಿಸಿದ ಸಂಕಷ್ಟವನ್ನು ತೋಡಿಕೊಂಡರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ