Program as scheduled: Preparations are complete for village deity fair on May 30

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು.

ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ ಆರಂಭಗೊಂಡು ಊರಿನ ಪ್ರಮುಖ ಬೀದಿಗಳಲ್ಲಿ ಸಾಗಿ ದ್ಯಾಮವ್ವನ ಕಟ್ಟೆಯಲ್ಲಿ ಪ್ರತಿಷ್ಠಾಪನೆ ಆಗಲಿದೆ ಎಂದು ತಿಳಿಸಿದರು.

ಈಗಾಗಲೇ ಮುದ್ದೇಬಿಹಾಳ ಪಟ್ಟಣದ ಎಲ್ಲ ದೇವಸ್ಥಾನ, ಮಸೀದಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ತಂಗಡಗಿ ರಸ್ತೆಯ ಆರಂಭದಿಂದ ವಿಜಯಪುರ ರಸ್ತೆ,ಆಲಮಟ್ಟಿ ರಸ್ತೆ,ಹುಡ್ಕೋ ರೋಡ್, ಮುಖ್ಯರಸ್ತೆಯಲ್ಲಿ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷ,ಹಾಲಿ ನಿರ್ದೇಶಕ ಸತೀಶ ಓಸ್ವಾಲ್, ಶರಣು ಸಜ್ಜನ, ಸುರೇಶಗೌಡ ಪಾಟೀಲ ಇಂಗಳಗೇರಿ ಮಾತನಾಡಿ, ಪೊಲೀಸ್ ಕಾರ್ಟರ್ಸ್ನಲ್ಲಿ ನಿರಂತರ ಐದು ದಿನಗಳ ಕಾಲ ಅನ್ನಪ್ರಸಾದ ವ್ಯವಸ್ಥೆ ಇರಲಿದೆ. ಕುಡಿವ ನೀರು, ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು ಊಟ ಮಾಡುವವರಿಗೆ ಸಮಸ್ಯೆ ಆಗದಂತೆ ವಾಟರ್‌ಫ್ರೂಫ್ ಪೆಂಡಾಲ್ ಹಾಕಿಸಿದ್ದು ಭಕ್ತಾದಿಗಳು ನಿರಾತಂಕವಾಗಿ ಪ್ರಸಾದ ಮಾಡಬಹುದಾಗಿದೆ ಎಂದರು.

ಭಾರ ಎತ್ತುವ ಸ್ಪರ್ಧೆಯನ್ನು ಕನ್ನಡ ಗಂಡು ಮಕ್ಕಳ ಶಾಲೆಯಿಂದ ಹಳೇ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಾಡಲಾಗುವುದು ಎಂದು ಕಮೀಟಿ ಮುಖಂಡರು ತಿಳಿಸಿದರು.

ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಮಾತನಾಡಿ, ಮಹಿಳೆಯರು ಕುಂಭಮೇಳದಲ್ಲಿ ಪಾಲ್ಗೊಂಡು ದೇವಿಯ ಮೂರ್ತಿಗಳ ಮೆರವಣಿಗೆ ಯಶಸ್ವಿಗೊಳಿಸಲಾಗುವುದು ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ಎಲ್ಲ ಜಾತಿ, ಧರ್ಮದವರು ಒಗ್ಗೂಡಿ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲು ಸಹಕಾರ ನೀಡಬೇಕು ಎಂದು ಹೇಳಿದರು.

ಸಮೀತಿ ಪ್ರಮುಖರಾದ ಕಾಮರಾಜ ಬಿರಾದಾರ, ವಾಯ್.ಎಚ್.ವಿಜಯಕರ್, ವೆಂಕನಗೌಡ ಪಾಟೀಲ, ಉದಯ ರಾಯಚೂರ, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮೊದಲಾದವರು ಮಾತನಾಡಿ ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ಜಾತ್ರಾ ಕಮೀಟಿ ಪದಾಧಿಕಾರಿಗಳು ಇದ್ದರು.

ಜಾತ್ರೆಯಲ್ಲಿ ರಂಗಭೂಮಿ ಕಲಾವಿದರಿಗೆ, ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಟಿವಿ ಕಲಾವಿದರಿಗಷ್ಟೇ ಮಹತ್ವ ನೀಡಿರುವುದು ರಂಗಭೂಮಿ ಪ್ರೇಮಿಗಳಿಗೆ ನಿರಾಸೆಯುನ್ನುಂಟು ಮಾಡಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾತ್ರಾ ಸಮೀತಿಯ ಮುಖಂಡ ಸತೀಶ ಓಸ್ವಾಲ್, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ,
ಈ ಬಾರಿ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ನಮ್ಮ ಗಮನಕ್ಕಿದೆ. ನಮ್ಮಿಂದ ಈ ವಿಷಯದಲ್ಲಿ ತಪ್ಪಾಗಿದ್ದು ಮುಂದಿನ ಜಾತ್ರೆಯಲ್ಲಿ ನಾಟಕ ಪ್ರದರ್ಶನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ದೇಣಿಗೆ ಸಂಗ್ರಹ, ಸಂಕಷ್ಟ ತೆರೆದಿದ್ದ ಮುಖಂಡ
ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳುವ ಕೆಲವು ಮುಖಂಡರು , ಮುದ್ದೇಬಿಹಾಳದಲ್ಲಿ ಕೋಟಿಗಟ್ಟಲೇ ಆಸ್ತಿ ಮಾಡಿಟ್ಟಿರುವ ಕೆಲವು ಗಣ್ಯರು, ಊರಿನ ಪ್ರಮುಖರು ಎಂದು ಹೇಳಿಕೊಳ್ಳುವವರು ದೇವಿ ಜಾತ್ರೆಯ ದೇಣಿಗೆ ಸಂಗ್ರಹಕ್ಕೆ ಹೋದಾಗ ತಮ್ಮ ಪತ್ನಿಯರನ್ನು ಮುಂದೆ ಕಳಿಸಿ ತಾವು ಊರಲ್ಲಿ ಇಲ್ಲ, ಇಷ್ಟೇ ಬರೆದುಕೊಳ್ಳಿ ಎಂದು ಅಲ್ಪಮೊತ್ತವನ್ನು ಕೊಟ್ಟು ಕಳಿಸಿದ ಉದಾಹರಣೆಗಳು ನಮ್ಮ ಬಳಿ ಇವೆ. ದೊಡ್ಡವರೆನ್ನಿಸಿಕೊಂಡವರು ಕೇವಲ ತೋರಿಕೆಗಾಗಿ ನಮ್ಮದು ಪ್ರತಿಷ್ಠಿತ ಮನೆತನಗಳು ಎಂದು ಹೇಳಿಕೊಂಡು ಪುಕ್ಕಟೆ ಪ್ರಚಾರ ಪಡೆದುಕೊಳ್ಳದೇ ಭಕ್ತಿಯಿಂದ ದೇವಿ ಜಾತ್ರೆಗೆ ದೇಣಿಗೆ ನೀಡಲು ಮುಕ್ತ ಮನಸ್ಸನ್ನು ಹೊಂದಿರುವಂತೆ ಮುಂದಿನ ದಿನಗಳಲ್ಲಿ ದೇವಿ ಅಂತವರಿಗೆ ಸದ್ಭುದ್ದಿ ಕೊಡಲಿ ಎಂದು ಹಣಕಾಸು ಸಮೀತಿಯ ಪ್ರಮುಖ ಸುನೀಲ ಇಲ್ಲೂರ, ಪುರಸಭೆ ಮಾಜಿ ಸದಸ್ಯ ರಾಜು ಬಳ್ಳೊಳ್ಳಿ ದೇಣಿಗೆ ಸಂಗ್ರಹದ ಸಮಯದಲ್ಲಿ ಎದುರಿಸಿದ ಸಂಕಷ್ಟವನ್ನು ತೋಡಿಕೊಂಡರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ