Properly conduct property survey in Hubli-Dharwad twin city: Minister Santosh Lad

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಗೆ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ ವಸೂಲಾತಿಯಲ್ಲಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ಸೈಟ್, ನಿರ್ಮಾಣಗಳು ಆಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲಸೌಕರ್ಯ ನೀಡಲು ಸಮಸ್ಯೆಗಳು ಆಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು ಎಂದು ತಿಳಿಸಿದರು.

ಕೃಷಿ ಭೂಮಿ 5 ಗುಂಟೆ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭಿರವಾಗಿ ಪರಿಗಣಿಸಬೇಕು. ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸರ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‍ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರವಾಗಿದೆ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು 149 ಕೋಟಿ ರೂ.ಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗಧಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅನುಮತಿ ಇಲ್ಲದ ಪಿಜಿಗಳಿಗೆ ನೋಟಿಸ್ ನೀಡಿ, ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿ ನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ, ಫರ್ಮಿಷನ್ ಪಡೆದಿರುವದಿಲ್ಲ ಎಂಬುದು ತಿಳಿದು ಬಂದಿದೆ ಎಂದರು.

ಅವಳಿನಗರದ ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡಗಳಲ್ಲಿ ಸಮೀಕ್ಷೆ ಮಾಡಿ, ಪಿಜಿಗಳು ಎಷ್ಟಿವೆ, ಎಷ್ಟು ಜನ ವಾಸಿಸುತ್ತಿದ್ದಾರೆ, ಮಾಲೀಕರು ಪಿಜಿ ವಾಸಿಗಳ ವೈಯಕ್ತಿಕ ವಿವರ ಪಡೆದಿರುವ ಬಗ್ಗೆ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷ ಬಿರಾದಾರ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಅಭಿಯಂತರರು, ಸಿಬ್ಬಂದಿ ಇತರರು ಭಾಗವಹಿಸಿದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ