Properly conduct property survey in Hubli-Dharwad twin city: Minister Santosh Lad

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಗೆ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ ವಸೂಲಾತಿಯಲ್ಲಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ಸೈಟ್, ನಿರ್ಮಾಣಗಳು ಆಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲಸೌಕರ್ಯ ನೀಡಲು ಸಮಸ್ಯೆಗಳು ಆಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು ಎಂದು ತಿಳಿಸಿದರು.

ಕೃಷಿ ಭೂಮಿ 5 ಗುಂಟೆ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭಿರವಾಗಿ ಪರಿಗಣಿಸಬೇಕು. ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸರ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‍ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರವಾಗಿದೆ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು 149 ಕೋಟಿ ರೂ.ಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗಧಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅನುಮತಿ ಇಲ್ಲದ ಪಿಜಿಗಳಿಗೆ ನೋಟಿಸ್ ನೀಡಿ, ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿ ನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ, ಫರ್ಮಿಷನ್ ಪಡೆದಿರುವದಿಲ್ಲ ಎಂಬುದು ತಿಳಿದು ಬಂದಿದೆ ಎಂದರು.

ಅವಳಿನಗರದ ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡಗಳಲ್ಲಿ ಸಮೀಕ್ಷೆ ಮಾಡಿ, ಪಿಜಿಗಳು ಎಷ್ಟಿವೆ, ಎಷ್ಟು ಜನ ವಾಸಿಸುತ್ತಿದ್ದಾರೆ, ಮಾಲೀಕರು ಪಿಜಿ ವಾಸಿಗಳ ವೈಯಕ್ತಿಕ ವಿವರ ಪಡೆದಿರುವ ಬಗ್ಗೆ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷ ಬಿರಾದಾರ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಅಭಿಯಂತರರು, ಸಿಬ್ಬಂದಿ ಇತರರು ಭಾಗವಹಿಸಿದ್ದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ