Properly conduct property survey in Hubli-Dharwad twin city: Minister Santosh Lad

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಗೆ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ ವಸೂಲಾತಿಯಲ್ಲಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ಸೈಟ್, ನಿರ್ಮಾಣಗಳು ಆಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲಸೌಕರ್ಯ ನೀಡಲು ಸಮಸ್ಯೆಗಳು ಆಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು ಎಂದು ತಿಳಿಸಿದರು.

ಕೃಷಿ ಭೂಮಿ 5 ಗುಂಟೆ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭಿರವಾಗಿ ಪರಿಗಣಿಸಬೇಕು. ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸರ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‍ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರವಾಗಿದೆ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು 149 ಕೋಟಿ ರೂ.ಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗಧಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅನುಮತಿ ಇಲ್ಲದ ಪಿಜಿಗಳಿಗೆ ನೋಟಿಸ್ ನೀಡಿ, ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿ ನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ, ಫರ್ಮಿಷನ್ ಪಡೆದಿರುವದಿಲ್ಲ ಎಂಬುದು ತಿಳಿದು ಬಂದಿದೆ ಎಂದರು.

ಅವಳಿನಗರದ ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡಗಳಲ್ಲಿ ಸಮೀಕ್ಷೆ ಮಾಡಿ, ಪಿಜಿಗಳು ಎಷ್ಟಿವೆ, ಎಷ್ಟು ಜನ ವಾಸಿಸುತ್ತಿದ್ದಾರೆ, ಮಾಲೀಕರು ಪಿಜಿ ವಾಸಿಗಳ ವೈಯಕ್ತಿಕ ವಿವರ ಪಡೆದಿರುವ ಬಗ್ಗೆ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷ ಬಿರಾದಾರ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಅಭಿಯಂತರರು, ಸಿಬ್ಬಂದಿ ಇತರರು ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ