Protest Accident during protest in Bagalkot.. CM Siddu fan set himself on fire

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿ‌ಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ.

ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ನಗರದ ಜಿಲ್ಲಾಡಳಿತದ ಸಮೀಪ‌ ಪ್ರತಿಭಟನಾಕಾರರು ಟಯರ್’ಗೆ ಬೆಂಕಿ ಹಚ್ಚಿ,ಕೇಂದ್ರ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ, ಬೆಂಕಿ ಹಚ್ಚಿ ಪ್ರತಿಭಟಿಸುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸಿದ್ಧರಾಮಯ್ಯನವರ ಅಭಿಮಾನಿ ಪೆಟ್ರೋಲ್‌ ಕಸಿದಯ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಬ್ಬ ಪ್ರತಿಭಟನಾಕರನಿಗೂ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ತಡೆದು, ಪೊಲೀಸರ ಸಹಾಯದಿಂದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ‌ಗುಳೇದಗುಡ್ಡ ಸಮೀಪದ ನಾಗರಾಳ ಎಸ್.ಪಿ.ಗ್ರಾಮದ ನಿವಾಸಿ ದ್ಯಾವಪ್ಪ ಮಾಗಿ ಎಂದು ಗುರುಸಲಾಗಿದೆ. ಪಕ್ಕದಪಕ್ಕದಲ್ಲೇ ಇದ್ದ ಹಿರಿಯರಿಗೆ ಸಣ್ಣ ಗಾಯವಾಗಿದೆ ಎಂದು ತಿಳಿದು ಬಂದಿದೆ.

ವ್ಯಕ್ತಿ ಕೈ, ಮೈ, ಕುತ್ತಿಗೆ, ಎದೆ,ವಬೆನ್ನು ಸೇರಿ ಹಲವೆಡೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.

ಈ ವೇಳೆ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.

ಕಮಲ-ದಳ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.

ರಿಟ್ ಅರ್ಜಿ; ರಾಜ್ಯಪಾಲರು ತನ್ನ ವಿರುದ್ಧ ತನಿಖೆ ನಡೆಸುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಈ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಅಭಿಷೇಕ್ ಮನು ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಸಿಎಂ ಸಿದ್ದರಾಮಯ್ಯ ಪ್ರಕರಣದ ವಕೀಲಿಕೆಯ ಹೊಣೆ ಹೊತ್ತಿದ್ದು ಅವರೊಂದಿಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ನೀಗದಿಯಾಗಿದೆ.

Latest News

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97