Protest Accident during protest in Bagalkot.. CM Siddu fan set himself on fire

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿ‌ಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ.

ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ನಗರದ ಜಿಲ್ಲಾಡಳಿತದ ಸಮೀಪ‌ ಪ್ರತಿಭಟನಾಕಾರರು ಟಯರ್’ಗೆ ಬೆಂಕಿ ಹಚ್ಚಿ,ಕೇಂದ್ರ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ, ಬೆಂಕಿ ಹಚ್ಚಿ ಪ್ರತಿಭಟಿಸುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸಿದ್ಧರಾಮಯ್ಯನವರ ಅಭಿಮಾನಿ ಪೆಟ್ರೋಲ್‌ ಕಸಿದಯ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಬ್ಬ ಪ್ರತಿಭಟನಾಕರನಿಗೂ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ತಡೆದು, ಪೊಲೀಸರ ಸಹಾಯದಿಂದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ‌ಗುಳೇದಗುಡ್ಡ ಸಮೀಪದ ನಾಗರಾಳ ಎಸ್.ಪಿ.ಗ್ರಾಮದ ನಿವಾಸಿ ದ್ಯಾವಪ್ಪ ಮಾಗಿ ಎಂದು ಗುರುಸಲಾಗಿದೆ. ಪಕ್ಕದಪಕ್ಕದಲ್ಲೇ ಇದ್ದ ಹಿರಿಯರಿಗೆ ಸಣ್ಣ ಗಾಯವಾಗಿದೆ ಎಂದು ತಿಳಿದು ಬಂದಿದೆ.

ವ್ಯಕ್ತಿ ಕೈ, ಮೈ, ಕುತ್ತಿಗೆ, ಎದೆ,ವಬೆನ್ನು ಸೇರಿ ಹಲವೆಡೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.

ಈ ವೇಳೆ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.

ಕಮಲ-ದಳ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.

ರಿಟ್ ಅರ್ಜಿ; ರಾಜ್ಯಪಾಲರು ತನ್ನ ವಿರುದ್ಧ ತನಿಖೆ ನಡೆಸುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಈ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಅಭಿಷೇಕ್ ಮನು ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಸಿಎಂ ಸಿದ್ದರಾಮಯ್ಯ ಪ್ರಕರಣದ ವಕೀಲಿಕೆಯ ಹೊಣೆ ಹೊತ್ತಿದ್ದು ಅವರೊಂದಿಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ನೀಗದಿಯಾಗಿದೆ.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ