Protest Accident during protest in Bagalkot.. CM Siddu fan set himself on fire

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿ‌ಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ.

ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ನಗರದ ಜಿಲ್ಲಾಡಳಿತದ ಸಮೀಪ‌ ಪ್ರತಿಭಟನಾಕಾರರು ಟಯರ್’ಗೆ ಬೆಂಕಿ ಹಚ್ಚಿ,ಕೇಂದ್ರ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ, ಬೆಂಕಿ ಹಚ್ಚಿ ಪ್ರತಿಭಟಿಸುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸಿದ್ಧರಾಮಯ್ಯನವರ ಅಭಿಮಾನಿ ಪೆಟ್ರೋಲ್‌ ಕಸಿದಯ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಬ್ಬ ಪ್ರತಿಭಟನಾಕರನಿಗೂ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ತಡೆದು, ಪೊಲೀಸರ ಸಹಾಯದಿಂದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ‌ಗುಳೇದಗುಡ್ಡ ಸಮೀಪದ ನಾಗರಾಳ ಎಸ್.ಪಿ.ಗ್ರಾಮದ ನಿವಾಸಿ ದ್ಯಾವಪ್ಪ ಮಾಗಿ ಎಂದು ಗುರುಸಲಾಗಿದೆ. ಪಕ್ಕದಪಕ್ಕದಲ್ಲೇ ಇದ್ದ ಹಿರಿಯರಿಗೆ ಸಣ್ಣ ಗಾಯವಾಗಿದೆ ಎಂದು ತಿಳಿದು ಬಂದಿದೆ.

ವ್ಯಕ್ತಿ ಕೈ, ಮೈ, ಕುತ್ತಿಗೆ, ಎದೆ,ವಬೆನ್ನು ಸೇರಿ ಹಲವೆಡೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.

ಈ ವೇಳೆ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.

ಕಮಲ-ದಳ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.

ರಿಟ್ ಅರ್ಜಿ; ರಾಜ್ಯಪಾಲರು ತನ್ನ ವಿರುದ್ಧ ತನಿಖೆ ನಡೆಸುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಈ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಅಭಿಷೇಕ್ ಮನು ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಸಿಎಂ ಸಿದ್ದರಾಮಯ್ಯ ಪ್ರಕರಣದ ವಕೀಲಿಕೆಯ ಹೊಣೆ ಹೊತ್ತಿದ್ದು ಅವರೊಂದಿಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ನೀಗದಿಯಾಗಿದೆ.

Latest News

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಸರ್ಕಾರಿ ಕೈಗಾರಿಕಾ ಹಾಗೂ ಉದ್ಯೋಗ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಗಂಗಮ್ಮ ಚಿನಿವಾರ ಅವರು ಬಂಥನಾಳ ಶಿವಯೋಗಿಗಳ ಮಾತಿನಿಂದ ಪ್ರೇರಿತರಾಗಿ ಶಿಕ್ಷಣಕ್ಕಾಗಿ ತಮ್ಮ ಇಡೀ ಆಸ್ತಿಯನ್ನು ದಾನ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು ಅಂತಹ ತಾಂತ್ರಿಕ ನೈಪುಣ್ಯತೆಯ ಕಾಲೇಜು ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಇರಲಿಲ್ಲ.ಇದೀಗ ಶಾಸಕ ಸಿ.ಎಸ್.ನಾಡಗೌಡ ಅವರು ವಿಶೇಷ ಮುತುವರ್ಜಿ ವಹಿಸಿ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರವನ್ನು ತಂದಿದ್ದು ಯುವಜನರು,ಮಧ್ಯಮ ವರ್ಗದವರಿಗೆ ಈ ಕಾಲೇಜು ಹೊಸ ಭರವಸೆಯನ್ನು ಹುಟ್ಟು ಹಾಕಿದೆ. ಪಟ್ಟಣದ ಪುರಸಭೆ,ಲೋಕೋಪಯೋಗಿ, ಕೆ.ಆರ್.ಐ.ಡಿ.ಎಲ್ ಹಾಗೂ ಕೆ.ಎಸ್.ಡಿ.ಎಲ್. (ಸಿ.ಎಸ್.ಆರ್) ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಸೆ.3