Protest Accident during protest in Bagalkot.. CM Siddu fan set himself on fire

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿ‌ಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ.

ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ನಗರದ ಜಿಲ್ಲಾಡಳಿತದ ಸಮೀಪ‌ ಪ್ರತಿಭಟನಾಕಾರರು ಟಯರ್’ಗೆ ಬೆಂಕಿ ಹಚ್ಚಿ,ಕೇಂದ್ರ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ, ಬೆಂಕಿ ಹಚ್ಚಿ ಪ್ರತಿಭಟಿಸುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸಿದ್ಧರಾಮಯ್ಯನವರ ಅಭಿಮಾನಿ ಪೆಟ್ರೋಲ್‌ ಕಸಿದಯ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಬ್ಬ ಪ್ರತಿಭಟನಾಕರನಿಗೂ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ತಡೆದು, ಪೊಲೀಸರ ಸಹಾಯದಿಂದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ‌ಗುಳೇದಗುಡ್ಡ ಸಮೀಪದ ನಾಗರಾಳ ಎಸ್.ಪಿ.ಗ್ರಾಮದ ನಿವಾಸಿ ದ್ಯಾವಪ್ಪ ಮಾಗಿ ಎಂದು ಗುರುಸಲಾಗಿದೆ. ಪಕ್ಕದಪಕ್ಕದಲ್ಲೇ ಇದ್ದ ಹಿರಿಯರಿಗೆ ಸಣ್ಣ ಗಾಯವಾಗಿದೆ ಎಂದು ತಿಳಿದು ಬಂದಿದೆ.

ವ್ಯಕ್ತಿ ಕೈ, ಮೈ, ಕುತ್ತಿಗೆ, ಎದೆ,ವಬೆನ್ನು ಸೇರಿ ಹಲವೆಡೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.

ಈ ವೇಳೆ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.

ಕಮಲ-ದಳ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.

ರಿಟ್ ಅರ್ಜಿ; ರಾಜ್ಯಪಾಲರು ತನ್ನ ವಿರುದ್ಧ ತನಿಖೆ ನಡೆಸುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಈ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.

ಅಭಿಷೇಕ್ ಮನು ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಸಿಎಂ ಸಿದ್ದರಾಮಯ್ಯ ಪ್ರಕರಣದ ವಕೀಲಿಕೆಯ ಹೊಣೆ ಹೊತ್ತಿದ್ದು ಅವರೊಂದಿಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ನೀಗದಿಯಾಗಿದೆ.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ