ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ


ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಲ್ಲವಿ ಹೊಟೇಲ್‌ನಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣದಲ್ಲಿ ವಿನಾಕಾರಣ ಸಿದ್ಧರಾಮಯ್ಯನವರ ಹೆಸರು ಎಳೆದು ತಂದು ಅವರಿಗೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬಿಜೆಪಿಯ ಏಜೆಂಟ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ವರ್ಚಸ್ಸು ತಾಳದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಮತ್ತಷ್ಟು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಅಹಿಂದ ವರ್ಗದ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯಪಾಲರ ಸಂವಿಧಾನ ಬಾಹಿರ ನಡೆಯನ್ನು ಖಂಡಿಸಿ ಆ.6 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ದೂರಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರವನ್ನು ಇಳಿಸಬೇಕೇ ಹೊರತು ರಾಜ್ಯಪಾಲರ ನೋಟಿಸ್‌ನಿಂದಲ್ಲ. ಆದರೆ ಬಹುಮತವಿರುವ ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸಲು ಸಿಎಂಗೆ ನೋಟಿಸ ಕೊಡುವುದರ ಹಿಂದೆ ಬಿಜೆಪಿ, ಜೆಡಿಎಸ್ ಪಕ್ಷದ ಪಿತೂರಿ ಕೆಲಸ ಮಾಡುತ್ತಿದೆ. ಸಿದ್ಧರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಸಿಎಂ ಆಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಅಹಿಂದ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಿಂದೆ ಎಸ್.ಆರ್.ಬೊಮ್ಮಾಯಿ ಇದೇ ರೀತಿ ರಾಜಭವನದ ಕಿರುಕುಳ ನಡೆದು ರಾಜೀನಾಮೆ ಕೊಡಬೇಕಾಯಿತು. ಸರ್ವೋಚ್ಚ ನ್ಯಾಯಾಲಯ ರಾಜಭವನಕ್ಕಿಂತ ಶಾಸನಸಭೆ ಸರ್ವೋಚ್ಛ ಎಂದು ತೀರ್ಪು ನೀಡಿತ್ತು. ಪ್ರಜಾಪ್ರಭುತ್ವದಲ್ಲಿ ಶಾಸನಸಭೆ ಸಂವಿಧಾನ ಬದ್ಧವಾಗಿ ಸರ್ವೋಚ್ಚ. ಶಾಸನ ಸಭೆಯಲ್ಲಿ ವಿಶೇಷ ಅಧಿವೇಶನವನ್ನು ನಡೆಸಿ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಬಹುದಾಗಿತ್ತು. ಆದರೆ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ಕಾಲಹರಣ ಮಾಡಿ ಹಗಲು-ರಾತ್ರಿ ಧರಣಿ ಮಾಡಿ ತಾಳ, ತಂಬೂರಿಯನ್ನು ಹಿಡಿದು ನರ್ತನ ಮಾಡಿ ಸದನದ ಗೌರವವನ್ನು ಹಾಳು ಮಾಡಿ ಚರ್ಚೆ ಇಲ್ಲದೆ ಒಂದು ದಿನ ಮುಂಚಿತವಾಗಿಯೇ ಸದನವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ದಾದಾ ಎತ್ತಿನಮನಿ, ಬಾಬಾ ಯಕೀನ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂತೋಷ ನಾಯ್ಕೋಡಿ, ಸಂಗಣ್ಣ ಮೇಲಿನಮನಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಣಮಂತ ಮೇಟಿ, ಮಹಾದೇವ ಪೂಜಾರಿ, ಮುನ್ನಾ ಸಗರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಹಳೇಮನಿ ಇದ್ದರು.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ