ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ


ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಲ್ಲವಿ ಹೊಟೇಲ್‌ನಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣದಲ್ಲಿ ವಿನಾಕಾರಣ ಸಿದ್ಧರಾಮಯ್ಯನವರ ಹೆಸರು ಎಳೆದು ತಂದು ಅವರಿಗೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬಿಜೆಪಿಯ ಏಜೆಂಟ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ವರ್ಚಸ್ಸು ತಾಳದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಮತ್ತಷ್ಟು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಅಹಿಂದ ವರ್ಗದ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯಪಾಲರ ಸಂವಿಧಾನ ಬಾಹಿರ ನಡೆಯನ್ನು ಖಂಡಿಸಿ ಆ.6 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ದೂರಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರವನ್ನು ಇಳಿಸಬೇಕೇ ಹೊರತು ರಾಜ್ಯಪಾಲರ ನೋಟಿಸ್‌ನಿಂದಲ್ಲ. ಆದರೆ ಬಹುಮತವಿರುವ ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸಲು ಸಿಎಂಗೆ ನೋಟಿಸ ಕೊಡುವುದರ ಹಿಂದೆ ಬಿಜೆಪಿ, ಜೆಡಿಎಸ್ ಪಕ್ಷದ ಪಿತೂರಿ ಕೆಲಸ ಮಾಡುತ್ತಿದೆ. ಸಿದ್ಧರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಸಿಎಂ ಆಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಅಹಿಂದ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಿಂದೆ ಎಸ್.ಆರ್.ಬೊಮ್ಮಾಯಿ ಇದೇ ರೀತಿ ರಾಜಭವನದ ಕಿರುಕುಳ ನಡೆದು ರಾಜೀನಾಮೆ ಕೊಡಬೇಕಾಯಿತು. ಸರ್ವೋಚ್ಚ ನ್ಯಾಯಾಲಯ ರಾಜಭವನಕ್ಕಿಂತ ಶಾಸನಸಭೆ ಸರ್ವೋಚ್ಛ ಎಂದು ತೀರ್ಪು ನೀಡಿತ್ತು. ಪ್ರಜಾಪ್ರಭುತ್ವದಲ್ಲಿ ಶಾಸನಸಭೆ ಸಂವಿಧಾನ ಬದ್ಧವಾಗಿ ಸರ್ವೋಚ್ಚ. ಶಾಸನ ಸಭೆಯಲ್ಲಿ ವಿಶೇಷ ಅಧಿವೇಶನವನ್ನು ನಡೆಸಿ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಬಹುದಾಗಿತ್ತು. ಆದರೆ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ಕಾಲಹರಣ ಮಾಡಿ ಹಗಲು-ರಾತ್ರಿ ಧರಣಿ ಮಾಡಿ ತಾಳ, ತಂಬೂರಿಯನ್ನು ಹಿಡಿದು ನರ್ತನ ಮಾಡಿ ಸದನದ ಗೌರವವನ್ನು ಹಾಳು ಮಾಡಿ ಚರ್ಚೆ ಇಲ್ಲದೆ ಒಂದು ದಿನ ಮುಂಚಿತವಾಗಿಯೇ ಸದನವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ದಾದಾ ಎತ್ತಿನಮನಿ, ಬಾಬಾ ಯಕೀನ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂತೋಷ ನಾಯ್ಕೋಡಿ, ಸಂಗಣ್ಣ ಮೇಲಿನಮನಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಣಮಂತ ಮೇಟಿ, ಮಹಾದೇವ ಪೂಜಾರಿ, ಮುನ್ನಾ ಸಗರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಹಳೇಮನಿ ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ