ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ


ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಲ್ಲವಿ ಹೊಟೇಲ್‌ನಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣದಲ್ಲಿ ವಿನಾಕಾರಣ ಸಿದ್ಧರಾಮಯ್ಯನವರ ಹೆಸರು ಎಳೆದು ತಂದು ಅವರಿಗೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬಿಜೆಪಿಯ ಏಜೆಂಟ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ವರ್ಚಸ್ಸು ತಾಳದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಮತ್ತಷ್ಟು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಅಹಿಂದ ವರ್ಗದ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯಪಾಲರ ಸಂವಿಧಾನ ಬಾಹಿರ ನಡೆಯನ್ನು ಖಂಡಿಸಿ ಆ.6 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ದೂರಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರವನ್ನು ಇಳಿಸಬೇಕೇ ಹೊರತು ರಾಜ್ಯಪಾಲರ ನೋಟಿಸ್‌ನಿಂದಲ್ಲ. ಆದರೆ ಬಹುಮತವಿರುವ ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸಲು ಸಿಎಂಗೆ ನೋಟಿಸ ಕೊಡುವುದರ ಹಿಂದೆ ಬಿಜೆಪಿ, ಜೆಡಿಎಸ್ ಪಕ್ಷದ ಪಿತೂರಿ ಕೆಲಸ ಮಾಡುತ್ತಿದೆ. ಸಿದ್ಧರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಸಿಎಂ ಆಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಅಹಿಂದ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಿಂದೆ ಎಸ್.ಆರ್.ಬೊಮ್ಮಾಯಿ ಇದೇ ರೀತಿ ರಾಜಭವನದ ಕಿರುಕುಳ ನಡೆದು ರಾಜೀನಾಮೆ ಕೊಡಬೇಕಾಯಿತು. ಸರ್ವೋಚ್ಚ ನ್ಯಾಯಾಲಯ ರಾಜಭವನಕ್ಕಿಂತ ಶಾಸನಸಭೆ ಸರ್ವೋಚ್ಛ ಎಂದು ತೀರ್ಪು ನೀಡಿತ್ತು. ಪ್ರಜಾಪ್ರಭುತ್ವದಲ್ಲಿ ಶಾಸನಸಭೆ ಸಂವಿಧಾನ ಬದ್ಧವಾಗಿ ಸರ್ವೋಚ್ಚ. ಶಾಸನ ಸಭೆಯಲ್ಲಿ ವಿಶೇಷ ಅಧಿವೇಶನವನ್ನು ನಡೆಸಿ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಬಹುದಾಗಿತ್ತು. ಆದರೆ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ಕಾಲಹರಣ ಮಾಡಿ ಹಗಲು-ರಾತ್ರಿ ಧರಣಿ ಮಾಡಿ ತಾಳ, ತಂಬೂರಿಯನ್ನು ಹಿಡಿದು ನರ್ತನ ಮಾಡಿ ಸದನದ ಗೌರವವನ್ನು ಹಾಳು ಮಾಡಿ ಚರ್ಚೆ ಇಲ್ಲದೆ ಒಂದು ದಿನ ಮುಂಚಿತವಾಗಿಯೇ ಸದನವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ದಾದಾ ಎತ್ತಿನಮನಿ, ಬಾಬಾ ಯಕೀನ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂತೋಷ ನಾಯ್ಕೋಡಿ, ಸಂಗಣ್ಣ ಮೇಲಿನಮನಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಣಮಂತ ಮೇಟಿ, ಮಹಾದೇವ ಪೂಜಾರಿ, ಮುನ್ನಾ ಸಗರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಹಳೇಮನಿ ಇದ್ದರು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು