ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ


ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಲ್ಲವಿ ಹೊಟೇಲ್‌ನಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣದಲ್ಲಿ ವಿನಾಕಾರಣ ಸಿದ್ಧರಾಮಯ್ಯನವರ ಹೆಸರು ಎಳೆದು ತಂದು ಅವರಿಗೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬಿಜೆಪಿಯ ಏಜೆಂಟ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ವರ್ಚಸ್ಸು ತಾಳದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಮತ್ತಷ್ಟು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಅಹಿಂದ ವರ್ಗದ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯಪಾಲರ ಸಂವಿಧಾನ ಬಾಹಿರ ನಡೆಯನ್ನು ಖಂಡಿಸಿ ಆ.6 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ದೂರಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರವನ್ನು ಇಳಿಸಬೇಕೇ ಹೊರತು ರಾಜ್ಯಪಾಲರ ನೋಟಿಸ್‌ನಿಂದಲ್ಲ. ಆದರೆ ಬಹುಮತವಿರುವ ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸಲು ಸಿಎಂಗೆ ನೋಟಿಸ ಕೊಡುವುದರ ಹಿಂದೆ ಬಿಜೆಪಿ, ಜೆಡಿಎಸ್ ಪಕ್ಷದ ಪಿತೂರಿ ಕೆಲಸ ಮಾಡುತ್ತಿದೆ. ಸಿದ್ಧರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಸಿಎಂ ಆಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಅಹಿಂದ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಿಂದೆ ಎಸ್.ಆರ್.ಬೊಮ್ಮಾಯಿ ಇದೇ ರೀತಿ ರಾಜಭವನದ ಕಿರುಕುಳ ನಡೆದು ರಾಜೀನಾಮೆ ಕೊಡಬೇಕಾಯಿತು. ಸರ್ವೋಚ್ಚ ನ್ಯಾಯಾಲಯ ರಾಜಭವನಕ್ಕಿಂತ ಶಾಸನಸಭೆ ಸರ್ವೋಚ್ಛ ಎಂದು ತೀರ್ಪು ನೀಡಿತ್ತು. ಪ್ರಜಾಪ್ರಭುತ್ವದಲ್ಲಿ ಶಾಸನಸಭೆ ಸಂವಿಧಾನ ಬದ್ಧವಾಗಿ ಸರ್ವೋಚ್ಚ. ಶಾಸನ ಸಭೆಯಲ್ಲಿ ವಿಶೇಷ ಅಧಿವೇಶನವನ್ನು ನಡೆಸಿ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಬಹುದಾಗಿತ್ತು. ಆದರೆ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ಕಾಲಹರಣ ಮಾಡಿ ಹಗಲು-ರಾತ್ರಿ ಧರಣಿ ಮಾಡಿ ತಾಳ, ತಂಬೂರಿಯನ್ನು ಹಿಡಿದು ನರ್ತನ ಮಾಡಿ ಸದನದ ಗೌರವವನ್ನು ಹಾಳು ಮಾಡಿ ಚರ್ಚೆ ಇಲ್ಲದೆ ಒಂದು ದಿನ ಮುಂಚಿತವಾಗಿಯೇ ಸದನವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ದಾದಾ ಎತ್ತಿನಮನಿ, ಬಾಬಾ ಯಕೀನ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂತೋಷ ನಾಯ್ಕೋಡಿ, ಸಂಗಣ್ಣ ಮೇಲಿನಮನಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಣಮಂತ ಮೇಟಿ, ಮಹಾದೇವ ಪೂಜಾರಿ, ಮುನ್ನಾ ಸಗರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಹಳೇಮನಿ ಇದ್ದರು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ